May 26, 2025
WhatsApp Image 2023-11-06 at 9.15.32 AM

ಬೆಳ್ತಂಗಡಿ: ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಬೆಳ್ತಂಗಡಿ – ಧರ್ಮಸ್ಥಳ 33 ಕೆ.ವಿ ವಿದ್ಯುತ್ ಸಂಪರ್ಕದ ಮುಖ್ಯ ಲೈನ್ ನ ಟವರ್ ಕುಸಿದು ಬಿದ್ದು ಒಂದು ಕಾರು ಹಾಗೂ ದ್ವಿಚಕ್ರ ವಾಹನಕ್ಕೆ ಹಾನಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಭಾನುವಾರ ಸಂಜೆ ಜಡಿಮಳೆಗೆ ಕಿರಿಯಾಡಿ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿ ವಿದ್ಯುತ್ ಸಂಪರ್ಕದ ಮುಖ್ಯ ಲೈನ್ ವಿದ್ಯುತ್ ಟವರ್ ನೆಲದತ್ತ ಭಾಗುತ್ತಿರುವುದನ್ನು ಗಮನಿಸಿದ ಮೆಸ್ಕಾಂ ಪವರ್ ಮ್ಯಾನ್ ಕೂಡಲೇ ಉಜಿರೆ ಉಪವಿಭಾಗಕ್ಕೆ ಮಾಹಿತಿ ನೀಡಿದರು.

ಕೂಡಲೇ ಮೆಸ್ಕಾಂ ಅಧಿಕಾರಿಗಳು ದೊಂಡೋಲೆಯ ಪವರ್ ಪ್ರಾಜೆಕ್ಟ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ತೆರಳಿದ್ದರು. ಪವರ್ ಪ್ರೊಜೆಕ್ಟ್ ನ ಅಧಿಕಾರಿಗಳು ಒಂದು ಕಾರು ಮತ್ತು ಬೈಕ್ ನಲ್ಲಿ ಬಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು.

ವಾಲಿಕೊಂಡು ಬರುತ್ತಿದ್ದ ಟವರ್ ಕಾರು ಹಾಗೂ ಬೈಕ್ ನ ಮೇಲೆಯೇ ಬಿದ್ದಿತ್ತೇನ್ನಲಾಗಿದೆ. ಕಾರಿನಲ್ಲಿ ಪವರ್ ಪ್ರಾಜೆಕ್ಟ್ ನ ಗಣೇಶ್ ಎಂಬವರಿದ್ದು, ಸಣ್ಣ ಪುಟ್ಟ ಗಾಯಕ್ಕೊಳಗಾಗಿ ಅಪಾಯದಿಂದ ಪಾರಾಗಿದ್ದಾರೆ.

ಮೆಸ್ಕಾಂನ ತುರ್ತು ಸ್ಪಂದನೆ ಕಾರಣ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ. ಟವರ್ ಕುಸಿತದ ಕಾರಣ ಧರ್ಮಸ್ಥಳ ಭಾಗದ ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>