ಮಂಗಳೂರು : ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಖೈದಿ ಆತ್ಮಹತ್ಯೆ

ಮಂಗಳೂರು : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿ ವೆನ್ಲಾಕ್ ಆಸ್ಪತ್ರೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಕಾಸರಗೋಡಿನ ಮಂಜೇಶ್ವರ ಬಂದ್ಯೋಡು ನಿವಾಸಿ ಮಹಮ್ಮದ್ ನೌಫಾಲ್ (24) ಮೃತಪಟ್ಟ ಕೈದಿ. 2022ರ ಡಿಸೆಂಬರ್ ಸಂದರ್ಭ ನೌಫಾಲ್ ಎನ್ ಡಿಪಿಎಸ್ ಕಾಯ್ದೆಯಡಿ ಕೊಣಾಜೆ ಪೊಲೀಸರಿಂದ ಅರೆಸ್ಟ್ ಆಗಿದ್ದ. ಆ ಬಳಿಕದಿಂದ ಆತ ಮಂಗಳೂರು ಜೈಲಿನಲ್ಲೇ ಇದ್ದನು. ಆತನಿಗೆ ಜಾಮೀನು ಕೊಡಿಸುವುದಕ್ಕೂ ಯಾರೂ ಬಂದಿರಲಿಲ್ಲ. ಜೈಲಿನಲ್ಲಿ ಈತ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ಹಿನ್ನೆಲೆಯಲ್ಲಿ ನೌಫಾಲ್ ನನ್ನು ಚಿಕಿತ್ಸೆಗೆಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಎಪ್ರಿಲ್ 25ರಂದು ದಾಖಲಿಸಲಾಗಿತ್ತು. ಮೇ 6ರಂದು ನಸುಕಿನ ವೇಳೆ 4ಗಂಟೆಗೆ ಬೆಡ್ ಶೀಟನ್ನೇ ಕಿಟಕಿಗೆ ಕಟ್ಟಿ ಅದನ್ನು ಕುಣಿಕೆಯಾಗಿಸಿ ಕೊರಳೊಡ್ಡಿದ್ದಾನೆ. ಅದೇ ಕೊಠಡಿಯಲ್ಲಿ ಇತರ ನಾಲ್ವರು ಕೈದಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಹೊರಗಡೆ ಕಾವಲಿಗೆ ಪೊಲೀಸರಿದ್ದರು. ಅದರ ನಡುವೆಯೂ ಈತ ಸಾವಿಗೆ ಶರಣಾಗಿದ್ದಾನೆ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.