ಜನಸಂಕಲ್ಪ ಯಾತ್ರೆ ಬಳಿಕ ರಾಜ್ಯಾದ್ಯಂತ ಬಿಜೆಪಿ ರಥಯಾತ್ರೆ : ಸಿಎಂ ಬಸವರಾಜ ಬೊಮ್ಮಾಯಿ

ಉಡುಪಿ : ಜನಸಂಕಲ್ಪ ಯಾತ್ರೆ ಮುಗಿದ ನಂತರ ರಾಜ್ಯಾದ್ಯಂತ ರಥ ಯಾತ್ರೆ ಪ್ರಾರಂಭವಾಗಲಿದ್ದು. 224 ಕ್ಷೇತ್ರಗಳಲ್ಲಿಯೂ ಕೂಡ ರಥಯಾತ್ರೆ ಸಂಚರಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಂಕಲ್ಪ ಯಾತ್ರೆ ಕಲ್ಯಾಣ ಕರ್ನಾಟಕದಲ್ಲಿ ನಡೆದಿದ್ದು, ಕರಾವಳಿಯಲ್ಲಿ ಇಂದು ಪ್ರಾರಂಭವಾಗುತ್ತಿದೆ. ಪ್ರತಿಯೊಂದು ಕ್ಷೇತ್ರಕ್ಕೂ ಭೇಟಿ ನೀಡುತ್ತೇವೆ. ನಾಳೆ ಗದಗ, ಹಾವೇರಿ, ನಾಡಿದ್ದು ಬೆಳಗಾವಿಯಲ್ಲಿ ಜನಸಂಕಲ್ಪ ಯಾತ್ರೆ ನಡೆಯಲಿದೆ. ಪ್ರತಿ ಕ್ಷೇತ್ರಕ್ಕೆ ಭೇಟಿ ನೀಡಿ ಅಲ್ಲಿ ಪಕ್ಷದ ಸಂಘಟನೆಯ ಜೊತೆಗೆ ಜನಸಂಘಟನೆಯನ್ನು ಮಾಡಲಿದ್ದೇವೆ. ಅಭೂತಪೂರ್ವ ಬೆಂಬಲ ಎಲ್ಲೆಡೆ ವ್ಯಕ್ತವಾಗುತ್ತಿದೆ. ಉತ್ಸಾಹ ಮೂಡಿದೆ. ಈ ಯಾತ್ರೆ ಮುಗಿದ ನಂತರ ಉತ್ತರ, ದಕ್ಷಿಣ ಎರಡೂ ದಿಕ್ಕಿನಿಂದ , ರಥ ಯಾತ್ರೆ ಪ್ರಾರಂಭವಾಗಲಿದ್ದು. 224 ಕ್ಷೇತ್ರಗಳಲ್ಲಿಯೂ ಕೂಡ ರಥಯಾತ್ರೆ ಸಂಚರಿಸಲಿದೆ ಎಂದರು

ಕಾಂಗ್ರೆಸ್ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ 5 ವರ್ಷ ಆಡಳಿತ ಮಾಡಿದಾಗಲೂ ನಾವೇ ಗೆಲ್ಲುತ್ತೇವೆ ಎನ್ನುತ್ತಿದ್ದರು. ಯಡಿಯೂರಪ್ಪ ಹಾಗೂ ಹೆಚ್.ಡಿ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುವುದಿಲ್ಲ ಎನ್ನುತ್ತಿದ್ದರು . 77 ಸ್ಥಳಗಳಿಗೆ ಬಂದು ನಿಂತರು. ಅಧಿಕಾರ ನಡೆಸಿ, ಕಾರ್ಯಕ್ರಮಗಳನ್ನು ಕೊಟ್ಟಾಗಲೇ, ಜನ ತಿರಸ್ಕಾರ ಮಾಡಿದ್ದಾರೆ. ಒಡೆದಾಳುವ, ಸಮಾಜ ಒಡೆಯುವ ನೀತಿ, ಕರ್ನಾಟಕವನ್ನು ಅಧೋಗತಿಗೆ ತೆಗೆದುಕೊಂಡು ಹೋಗಿರುವುದನ್ನು ಜನ ಮರೆತಿಲ್ಲ. ಅವರು ಹೇಳಿದ್ದಕ್ಕೆ ತಲೆಕೆಡಿಸಿಕೊಳ್ಳಬೇಕಿಲ್ಲ ಎಂದರು.

ಕರಾವಳಿಯಲ್ಲಿ ಹೆಚ್ಚಿನ ಹೂಡಿಕೆ

ನವೀಕರಿಸಬಹುದಾದ ಇಂಧನ, ವಿಶೇಷವಾಗಿ ಹೈಡ್ರೋಜನ್ ಇಂಧನ, ಅಮೋನಿಯಾ ಕರಾವಳಿ ಪ್ರದೇಶದಲ್ಲಿಯೇ ಹೆಚ್ಚಿದ್ದು, ಮಂಗಳೂರು ಮತ್ತು ಉಡುಪಿ ಪ್ರದೇಶದಲ್ಲಿ ಹೂಡಿಕೆಯ ನಿರೀಕ್ಷೆಯಲ್ಲಿದ್ದೇವೆ ಎಂದರು.

Check Also

ಶಿರೂರು ಗುಡ್ಡ ಕುಸಿತ: ಶೋಧ ಕಾರ್ಯ ಕ್ಕೆ ಈಶ್ವರ್ ಮಲ್ಪೆ ತಂಡ ಭೇಟಿ

ಶಿರೂರು: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು ನೀರಿನಲ್ಲಿನಲ್ಲಿ ಮುಳುಗಿರುವ ಟ್ರಕ್ ಅನ್ನು ನೀರಿನಿಂದ …

Leave a Reply

Your email address will not be published. Required fields are marked *

You cannot copy content of this page.