May 31, 2025
WhatsApp Image 2023-12-07 at 10.26.47 AM

ಬಂಟ್ವಾಳ: ಮನೆಯಂಗಳಕ್ಕೆ ಪ್ರವೇಶಿಸಿದ ನಾಲೈದು ಮಂದಿಯ ಗುಂಪು ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಘಟನೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ ಮೂಡ ಗ್ರಾಮದ ಗಾಂದೋಡಿ ಎಂಬಲ್ಲಿ ಬುಧವಾರ ಮುಂಜಾನೆ ನಡೆದಿದೆ. ಸುಮ್ಮಿ ಯಾನೆ ಸುಮಿತ್ ಆಳ್ವ ಮತ್ತು ಸಹಚರರು ಸೇರಿ ಕೃತ್ಯ ಎಸಗಿದ್ದಾರೆ. ಈ ಬಗ್ಗೆ ಮಂಗಳೂರು ತಾಲೂಕು ಬಳ್ಳಾಲಭಾಗ್ ಶಿರ್ವ ವಿಸ್ತಾ ಅಪಾರ್ಟ್ ಮೆಂಟ್ ನಿವಾಸಿ ಎಂ ಚಂದ್ರ ಶೆಟ್ಟಿ ಅವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದು, ತನ್ನ ಹೆಂಡತಿಗೆ ಸಂಬಂದಿಸಿದ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಗಾಂದೋಡಿ ಎಂಬಲ್ಲಿರುವ ಮನೆಗೆ ಬುಧವಾರ ಬೆಳಗಿನ ಜಾವ ಸುಮಾರು 2 ಗಂಟೆಗೆ ಬಿ ಮೂಡ ನಿವಾಸಿ, ಆರೋಪಿ ಸುಮಿತ್ ಆಳ್ವ (45) ಎಂಬಾತ ತನ್ನ 4 ಮಂದಿ ಸಹಚರರ ಜೊತೆ ಸೇರಿ ಮಹೇಂದ್ರ ಎಕ್ಸ್ ಯು ವಿ 500 ವಾಹನದಲ್ಲಿ ಬಂದು, ಮನೆಯ ಎದುರುಗಡೆ ಅಳವಡಿಸಿದ ಕಬ್ಬಿಣ ಗೇಟ್ ಮುರಿದು ಮನೆಯಂಗಳಕ್ಕೆ ಬಂದು ಮನೆಯ ಮುಂಭಾಗಕ್ಕೆ ಪೆಟ್ರೋಲ್ ಎರಚಿ ಬೆಂಕಿ ಹೆಚ್ಚಿರುತ್ತಾರೆ. ಪರಿಣಾಮ ಮನೆಯ ಮುಂಬಾಗಿಲು ಸುಟ್ಟು ಹೋಗಿದ್ದು, ಹೊರಾಂಗಣದಲ್ಲಿದ್ದ ಕುರ್ಚಿ ಸಂಪೂರ್ಣ ಸುಟ್ಟು ಹೋಗಿರುತ್ತದೆ. ಸುಮಿತ್ ಆಳ್ವ ಬಡ್ಡಿ ದಂಧೆ ನಡೆಸುತ್ತಿದ್ದು ಈ ಹಿಂದೆ ಕಳ್ಳ ಬಟ್ಟಿ ಮತ್ತು ಜುಗಾರಿ ದಂಧೆ ನಡೆಸುತ್ತಿದ್ದ ಎಂಬ ಆರೋಪವಿದೆ ಘಟನೆಯ ಬಗ್ಗೆ ಇದೇ ಮನೆಯಲ್ಲಿ ಬಾಡಿಗೆ ವಾಸವಿರುವ ಪ್ರದೀಪ ಹಾಗೂ ಮನ್ಸೂರ್ ಎಂಬವರು ಮನೆಯ ಒಳಗಿನಿಂದ ಗಮನಿಸಿ, ಬೊಬ್ಬೆ ಹೊಡೆದು, ಚಂದ್ರ ಶೆಟ್ಟಿ ಅವರಿಗೆ ಕರೆ ಮಾಡಿ ತಿಳಿಸಿದಂತೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ-143/2023 ಕಲಂ: 143, 147, 448, 427, 436, 511 307 ಜೊತೆ 149 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>