April 30, 2026
WhatsApp Image 2026-03-08 at 9.34.29 AM

ಕಾಪು: ಕಾಂಗ್ರೆಸ್ ಮುಖಂಡ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಜ.೩೦ರಂದು ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರ್ ರಾಜ್ಯ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ಕಾಪು ಪೊಲೀಸರು ಯಶಸ್ವಿಯಾಗಿದ್ದಾರೆ.

ತಮಿಳುನಾಡು ರಾಜ್ಯದ ತಿರುನಲ್ವೇಲಿ ತಿರುಕ್ಕುರುಂಕುಡಿಯ ಎಸಾಕ್ಕಿ ರಾಜ(28) ಹಾಗೂ ಆತನ ಸಹಚಾರ ನಂಬಿ ರಾಜ(23) ಬಂಧಿತ ಆರೋಪಿಗಳು.

ಕಾಪು ದಿವಾಕರ ಶೆಟ್ಟಿ ಕುಟುಂಬದವರು ಉಳಿಯಾರಗೋಳಿ ಗ್ರಾಮದ ಕೋತಲಕಟ್ಟೆಯಲ್ಲಿರುವ ಮನೆಗೆ ಬೀಗ ಹಾಕಿ ಮುಂಬಯಿಗೆ ಹೋಗಿದ್ದು, ಈ ಸಂದರ್ಭದಲ್ಲಿ ಮನೆಯ ಮುಖ್ಯ ಬಾಗಿಲ ಬೀಗವನ್ನು ಒಡೆದು ನುಗ್ಗಿದ ಕಳ್ಳರು, ದೇವರ ಕೋಣೆಯಲ್ಲಿದ್ದ ಮತ್ತು ಬೆಡ್‌ರೂಂನ ಕಪಾಟಿನಲ್ಲಿದ್ದ ಬೆಳ್ಳಿ ಹಾಗೂ 30 ಗ್ರಾಂ ತೂಕದ ಕರಗಿಸಿದ ಗಟ್ಟಿ ಚಿನ್ನ, ವಾಚ್ ಹಾಗೂ ನಗದು ಸೇರಿ ಒಟ್ಟು Rs. 19,05,000. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಕುಖ್ಯಾತ ಅಂತರ್ ರಾಜ್ಯ ಕಳ್ಳವು ಆರೋಪಿ ಇಸಾಕಿ ರಾಜಾ ಮತ್ತು ಆತನ ಸಹಚರ ನಂಬಿ ರಾಜ ಎಂಬಾತನನ್ನು ಬಂಧಿಸಿದರು. ಈ ಪ್ರಕರಣದಲ್ಲಿ ತಮಿಳುನಾಡು ರಾಜ್ಯದ ಉಳಿದ ಪ್ರಮುಖ ಮೂರು ಆರೋಪಿಗಳು ಭಾಗಿಯಾಗಿದ್ದು, ಇವರನ್ನು ಪತ್ತೆ ಹಚ್ಚಿ, ಸೊತ್ತು ವಶಪಡಿಸಿಕೊಳ್ಳಲು ಬಾಕಿ ಇದೆ. ಈ ಆರೋಪಿಗಳ ವಿರುದ್ಧ ಕೇರಳ ಮತ್ತು ತಮಿಳುನಾಡು ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ ಎಸ್ಪಿ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್ಪಿ ಸುಧಾಕರ ಎಸ್.ನಾಯ್ಕ, ಕಾರ್ಕಳ ಡಿವೈಎಸ್ಪಿ ಎಸ್.ವಿಜಯಪ್ರಸಾದ್ ನೇತೃತ್ವದಲ್ಲಿ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕರು ಅಝಮತ್ ಅಲಿ ಜಿ. ಹಾಗೂ ಕಾಪು ಪೊಲೀಸ್ ಎಸ್ಸೆಗಳಾದ ತೇಜಸ್ವಿ ಟಿ.ಐ., ಶುಭಕರ, ಮತ್ತು ಸಿಬ್ಬಂದಿ ಮಹಮ್ಮದ್ ರಫೀಕ್, ನಾರಾಯಣ, ಮೋಹನ ಚಂದ್ರ, ರಘು, ಪಡುಬಿದ್ರಿ ಠಾಣೆಯ ಎಎಎಸ್ಸೆ ರಾಜೇಶ್, ಶಿರ್ವ ಠಾಣೆಯ ದಯಾನಂದ ಪ್ರಭು ಮತ್ತು ಅನ್ವರ್ ಆಲಿ ಹಾಗೂ ಕಾಪು ವೃತ್ತ ಕಛೇರಿಯ ಸಿಬ್ಬಂದಿ ಶರಣಪ್ಪ ಹಾಗೂ ಜೀವನ್ ಮತ್ತು ಜೀಪು ಚಾಲಕರಾದ ಜಗದೀಶ್ ಹಾಗೂ ಸಿಡಿಆರ್ ವಿಭಾಗದ ದಿನೇಶ್ ಮತ್ತು ನಿತಿನ್ ಈ ಕಾರ್ಯಾಚರಣೆ ನಡೆಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.