ಮಂಗಳೂರು:ಪದವಿ ವಿದ್ಯಾರ್ಥಿಗಳಿಗೂ ದಸರಾ ರಜೆ ನೀಡುವಂತೆ – ಶಾಸಕ ವೇದವ್ಯಾಸ ಕಾಮತ್ ಆಗ್ರಹ

ಮಂಗಳೂರು: ನವರಾತ್ರಿ ಸಡಗರ ಹಾಗೂ ದಸರಾ ಸಂಭ್ರಮದ ಹಿನ್ನೆಲೆಯಲ್ಲಿ ಶಾಲೆಗಳಿಗೆ ದಸರಾ ರಜೆ ಈಗಾಗಲೇ ಘೋಷಣೆಯಾಗಿದೆ. ಆದರೆ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪದವಿ ವಿದ್ಯಾರ್ಥಿಗಳಿಗೆ ದಸರಾ ರಜೆ ಇನ್ನೂ ಅಂತಿಮವಾಗಿಲ್ಲ. ಶಾಸಕ ವೇದವ್ಯಾಸ ಕಾಮತ್ ಅವರು ಈ ಬಗ್ಗೆ ಸರಕಾರದ ಗಮನಸೆಳೆದಿದ್ದು, ‘ಮಂಗಳೂರು ದಸರಾ ಹಬ್ಬಕ್ಕೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಸಂಬಂಧಪಟ್ಟವರನ್ನು ಆಗ್ರಹಿಸುವಂತೆ ಹಲವಾರು ಪೋಷಕರು ಈಗಾಗಲೇ ಮನವಿ ಮಾಡಿದ್ದಾರೆ. ಹೀಗಾಗಿ ಮಂಗಳೂರು ವಿ.ವಿ., ಜಿಲ್ಲಾಡಳಿತ ಹಾಗೂ ಸರಕಾರ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ. ಹಿಂದಿನಬಿಜೆಪಿಸರಕಾರದ ಅವಧಿಯಲ್ಲಿದಸರಾ ಹಬ್ಬದ ರಜೆಯಲ್ಲಿ ಉಂಟಾಗಿದ್ದ ವ್ಯತ್ಯಾಸವನ್ನು ಸರಕಾರದ ಮಟ್ಟದಲ್ಲಿಯೇ ಮಾರ್ಪಾಡುಗೊಳಿಸುವಲ್ಲಿ ಯಶಸ್ವಿಯಾಗಿದ್ದೆ. ಆದರೆ ಪ್ರಸ್ತುತ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದು ಹಿಂದೂ ಧಾರ್ಮಿಕ ಶ್ರದ್ಧೆ, ಭಾವನೆಗಳಿಗೆ ಬೆಲೆ ನೀಡಬೇಕು. ದಸರಾ ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರಿನ ಅನಂತರ ಅತ್ಯಂತ ಜನಾಕರ್ಷಣೆ ಗಳಿಸಿದೆ. ಹೀಗಾಗಿ ನವರಾತ್ರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, – – ಪೋಷಕರು, ಸೇರಿದಂತೆ ಎಲ್ಲರೂ ಸಂಭ್ರಮದಿಂದ ಆಚರಿಸುವಂತಾಗಲು ರಜೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.