ಉಡುಪಿ: ಅಕ್ರಮ ಕಸಾಯಿ ಖಾನೆಗೆ ದಾಳಿ ; 200 ಕೆ.ಜಿ ದನದ ಮಾಂಸ ವಶಕ್ಕೆ ಪಡೆದ ಪೊಲೀಸರು

ಕಾಪು: ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿನ ಅಕ್ರಮ ಕಸಾಯಿ ಖಾನೆಗೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿಗೆ ತಲುಪಿ ಅಲ್ಲಿನ ಫ್ಯಾಕ್ಟರಿಯ ಸಮೀಪ ಮರೆಯಲ್ಲಿ ನಿಂತು ನೋಡಿದಾಗಿ ಹಿಂಭಾಗದ ಹಾದಿಯಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ದನದ ಮಾಂಸವನ್ನು ಕಟಾವು ಮಾಡುತ್ತಿರುವುದು ಕಂಡುಬಂದಿದೆ ಎನ್ನಲಾಗಿದೆ.

ಈ ವೇಳೆ ಮೊಹಮ್ಮದ್ ಆರೀಫ್ ಹಾಗೂ ಇನ್ನೋರ್ವ ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ಸುಮಾರು 200 ಕೆ.ಜಿ ಯಷ್ಟು ದನದ ಮಾಂಸ, ಮಾರಕಾಯುಧ, ಇತರ ಸ್ವತ್ತು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

Check Also

ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ : ರಾಷ್ಟ್ರೀಯ ಹೆದ್ದಾರಿ ಬಂದ್, ಸಂಚಾರ ಸಂಪೂರ್ಣ ಸ್ಥಗಿತ..!

ಹಾಸನ: ಭಾರೀ ಮಳೆಗೆ ಸಕಲೇಶಪುರ ಎತ್ತಿನಹಳ್ಳದ ಸಮೀಪ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ …

Leave a Reply

Your email address will not be published. Required fields are marked *

You cannot copy content of this page.