ಸುಬ್ರಹ್ಮಣ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ- ಇಬ್ಬರು ಆರೋಪಿಗಳು ಅರೆಸ್ಟ್

ಹಿಂದೂ ಹುಡುಗಿಯ ಜೊತೆ ತಿರುಗಾಟ ನಡೆಸಿದ ಆರೋಪದಲ್ಲಿ ಮುಸ್ಲಿಂ ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಎಂದು ಗುರುತಿಸಲಾಗಿದೆ.

ಯುವತಿಯ ಜೊತೆ ತಿರುಗಾಡುತ್ತಿದ್ದ ಎಂದು ಆರೋಪಿಸಿ ಯುವಕನೋರ್ವನಿಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರೆಂದು ಹೇಳಲಾದ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿತ್ತು.

ಜ.5ರಂದು ಕಲ್ಲುಗುಂಡಿಯ ಹಫೀದ್ ಎಂಬಾತ ಸುಬ್ರಹ್ಮಣ್ಯಕ್ಕೆ ಬಂದಿದ್ದ ವೇಳೆ ಕುಮಾರಧಾರ ಬಳಿಯ ಹಳೆ ಕಟ್ಟಡದ ಕೋಣೆಯೊಳಗೆ ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಘಟನೆಯಿಂದ ಗಾಯಗೊಂಡ ಹಫೀದ್ ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಹಫೀದ್ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

Check Also

ಮಣಿಪಾಲ: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ..! ಸ್ಥಳೀಯರಲ್ಲಿ ಆತಂಕ

ಮಣಿಪಾಲ: ಉಡುಪಿ ನಗರದ ಮಣಿಪಾಲದ ಬಳಿಯ ಪೆರಂಪಳ್ಳಿಯ ಮನೆಯೊಂದರ ಅಂಗಳದಲ್ಲಿ ಶುಕ್ರವಾರ ರಾತ್ರಿ ಚಿರತೆ ಸಂಚಾರ ಕಂಡು ಬಂದಿದ್ದು, ಘಟನೆ …

Leave a Reply

Your email address will not be published. Required fields are marked *

You cannot copy content of this page.