BIGG NEWS : ‘ಕೊರಗಜ್ಜನ ಕೋಲ’ಕ್ಕೆ ಅಡ್ಡಿ ಆಗೋದು ಬೇಡ ಎಂದು ‘ರೋಡ್ ಶೋ’ ರದ್ದು ಮಾಡಿದ ‘ಅಮಿತ್ ಶಾ’

ಮಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ಪಕ್ಷಗಳ ಚಟುವಟಿಕೆಗಳು ರಂಗೇರುತ್ತಿದೆ. ಈಗಾಗಲೇ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿದ್ರೆ, ಇನ್ನು ಕೆಲವು ಕ್ಷೇತ್ರ ಹುಡುಕಾಟದಲ್ಲಿ ತೊಡಗಿದ್ದಾರೆ.

ಈ ಬೆನ್ನಲೇ ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ಬಿಜೆಪಿ ನಾನಾ ತಂತ್ರ ರೂಪಿಸುತ್ತಿದೆ.

ಹೀಗಾಗಿ ಚುನಾವಣೆ ಪ್ರಚಾರಕ್ಕಾಗಿ ಬಿಜೆಪಿ ಕೇಂದ್ರ ನಾಯಕರು ಆಗಾಗ ಕರ್ನಾಟಕ್ಕೆ ಭೇಟಿ ನೀಡುತ್ತಿದ್ದರು. ಇದೀಗ ಇದೇ ತಿಂಗಳು ಅಂದರೆ ಫೆಬ್ರವರಿ 11ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಅಮಿತ್ ಶಾ ಭೇಟಿ ನೀಡಲಿದ್ದಾರೆ.

ಫೆ.11 ರಂದು ಕರಾವಳಿಯಲ್ಲಿ ಕೆಲವು ಸರ್ಕಾರಿ ಕಾರ್ಯಕ್ರಮ ಹಾಗೂ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸುವುದಕ್ಕಾಗಿ ಅಮಿತ್ ಶಾ ಬರುತ್ತಿದ್ದಾರೆ. ಅಮಿತ್ ಶಾ ಭೇಟಿ ಹಿನ್ನೆಲೆ ಮಂಗಳೂರಿನಲ್ಲಿ ಒಂದು ಕಡೆ ರೋಡ್ ಶೋ ನಡೆಸಲು ನಿರ್ಧರಿಸಲಾಗಿತ್ತು. ಕಾವೂರಿನಿಂದ ಪದವಿನಂಗಡಿ ಮೇರಿಹಿಲ್ ವರೆಗೆ ಸುಮಾರು ಎರಡೂವರೆ ಕಿಮೀ ಉದ್ದಕ್ಕೆ ರೋಡ್ ಶೋ ನಲ್ಲಿ ಅಮಿತ್ ಶಾ ಭಾಗವಹಿಸುವುದು ಫಿಕ್ಸ್ ಆಗಿತ್ತು. ಇದರ ನಡುವೆ ರೋಡ್ ಶೋ ದಾರಿಯಲ್ಲಿ ಬೋಂದೆಲ್ ನಿಂದ ಪದವಿನಂಗಡಿ ನಡುವೆ ಬರುವ ಕೊರಗಜ್ಜನ ಗುಡಿಯಲ್ಲಿ ಫೆ.11 ರಂದು ಕೋಲ ನಡೆಯುವ ವಿಷಯ ಗೊತ್ತಾಗಿದೆ. ಅಂದು ರೋಡ್ ಶೋ ನಡೆಸಿದರೆ ಕೋಲಕ್ಕೆ ಹಾಗೂ ಅಲ್ಲಿನ ಜನರಿಗೆ ತೊಂದರೆಯಾಗುತ್ತದೆ ಎಂದು ಭಾವಿಸಿ ಬಿಜೆಪಿ ನಾಯಕರು ಅಮಿತ್ ಶಾಗೆ ವಿಷಯ ತಿಳಿಸಿದ್ದಾರೆ. ಕೊರಗಜ್ಜನ ಕೋಲಕ್ಕೆ ತೊಂದರೆಯಾಗುವುದಾದರೆ ರೋಡ್ ಶೋ ವನ್ನೇ ರದ್ದು ಮಾಡಿ ಎಂದು ಅಮಿತ್ ಶಾ ಬಿಜೆಪಿ ನಾಯಕರಿಗೆ ಹೇಳಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ಮಂಗಳೂರಿನಲ್ಲಿ ಆಯೋಜನೆಗೊಂಡ ರೋಡ್ ಶೋ ರದ್ದು ಮಾಡಲಾಗಿದ್ದು, ಇನ್ನೊಂದು ಕಡೆ ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ.

ಇನ್ನೂ, ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಯ ಮೈದಾನದಲ್ಲಿ ಅಮಿತ್ ಶಾ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಸುಮಾರು ಒಂದು ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಸಂಗವಾಗಿ ಸಮಾವೇಶ ನಡೆಯಲಿದೆ.

Check Also

ಉಡುಪಿ: ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿ ಸಾವು..!

ಉಡುಪಿ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮೂಡಬಳ್ಳೆಯಲ್ಲಿ …

Leave a Reply

Your email address will not be published. Required fields are marked *

You cannot copy content of this page.