ಮಂಗಳೂರು : ಮಹಿಳೆಗೆ ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ಆರೋಪ – ಹೆಡ್ ಕಾನ್‌ಸ್ಟೇಬಲ್ ಸಸ್ಪೆಂಡ್

ಮಂಗಳೂರು : ದೂರು ನೀಡಲು ಬಂದಿರುವ ಮಹಿಳೆಯ ಮೊಬೈಲ್ ಗೆ ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ಆರೋಪದಲ್ಲಿ ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸಂತೋಷ್ ಸಿ.ಜೆ. ಎಂಬಾತನನ್ನು ಮಂಗಳೂರು ಪೊಲೀಸ್ ಕಮಿಷನರ್ ಅಮಾನತುಗೊಳಿಸಿದ್ದಾರೆ. ಮಹಿಳೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಕಾವೂರು ಠಾಣೆಗೆ ಬಂದಿದ್ದ ವೇಳೆ ಹೆಡ್ ಕಾನ್‌ಸ್ಟೇಬಲ್‌ ಸಂತೋಷ್‌ ಆಕೆಯ ಮೊಬೈಲ್ ನಂಬ‌ರ್ ಪಡೆದಿದ್ದ. ಆ ಬಳಿಕದಿಂದ ಆಕೆಗೆ ಅಸಭ್ಯವಾದ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಯಾರಲ್ಲಾದರೂ ಹೇಳಿದರೆ ಜೀವನ ಪರ್ಯಂತ ಕೊರಗುವಂತೆ ಮಾಡುತ್ತೇನೆ. ನಿನ್ನ ಇಡಿ ಕುಟುಂಬವನ್ನು ಮುಗಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಸಂತೋಷ್ ಬೆದರಿಕೆ, ಕಿರುಕುಳದಿಂದ ಬೇಸತ್ತ ಮಹಿಳೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ಆತ ಬೆದರಿಕೆ ಒಡ್ಡಿರುವ ಆಡಿಯೋ ಸಂದೇಶವನ್ನು ಕಮಿಷನರ್ ಅವರಿಗೆ ನೀಡಿದ್ದಾರೆಂದು ತಿಳಿದು ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಕಮಿಷನ‌ರ್, ಹೆಡ್ ಕಾನ್‌ಸ್ಟೇಬಲ್ ಸಂತೋಷ್‌ನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಲ್ಲದೇ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿಗೆ ಸೂಚಿಸಿದ್ದಾರೆ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.