May 29, 2025 5:17:29 AM
WhatsApp Image 2023-10-09 at 5.33.35 PM

ಸುಳ್ಯ: ಚಲಿಸುತ್ತಿದ್ದ ಬಸ್ ಹತ್ತಲು ಯತ್ನಿಸಿ ವ್ಯಕ್ತಿಯೊಬ್ಬರು ರಸ್ತೆಗೆ ಎಸೆಯಲ್ಪಟ್ಡು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ನಡೆದಿದೆ.

ಆಲೆಟ್ಟಿ ಗ್ರಾಮದ ಕೂಳಿಯಡ್ಕ ಕರುಣಾಕರ ಮೃತಪಟ್ಟ ದುರ್ದೈವಿ.

ಸುಳ್ಯ ಆಲೆಟ್ಟಿ ಕ್ರಾಸ್ ಬಳಿ ಖಾಸಗಿ ಬಸ್ ಹತ್ತಲು ಹೋದಾಗ ಬಸ್ಸಿನ ಬಾಗಿಲು ತಳ್ಳಲ್ಪಟ್ಟು ರಸ್ತೆಗೆ ಆಯತಪ್ಪಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಚಿಕಿತ್ಸೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆ ಬಳಿಕ ಮನೆಯಲ್ಲೇ ಮರುದಿನ ಮುಂಜಾನೆ ಸಮಸ್ಯೆ ಉಲ್ಬಣವಾದ ಹಿನ್ನಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಮತ್ತೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಯಿತು. ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿ ಸಾವನ್ನಪಿದ್ದಾರೆ ತಿಳಿದು ಬಂದಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>