December 6, 2025
WhatsApp Image 2025-02-10 at 12.35.53 PM

ಹೆಬ್ರಿ: ಒಣಗಿದ ಅಡಿಕೆ ಮರ ತುಂಡಾಗಿ ತಲೆಯ ಮೇಲೆ ಬಿದ್ದ ಪರಿಣಾಮ ಕೃಷಿಕರೊಬ್ಬರು ಮೃತಪಟ್ಟ ಘಟನೆ ವರಂಗ ಗ್ರಾಮದ ಮೂಡುಕುಡೂರು ಕೆಳಗಿನ ಮನೆ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಸ್ಥಳೀಯ ನಿವಾಸಿ ರಾಮ(62) ಎಂದು ಗುರುತಿಸಲಾಗಿದೆ. ಇವರು ತೋಟದಲ್ಲಿ ಒಣಗಿದ ಅಡಿಕೆ ಮರವನ್ನು ಹಗ್ಗ ಹಾಕಿ ಎಳೆಯುತ್ತಿರುವಾಗ ಆಕಸ್ಮಿಕವಾಗಿ ಆಯತಪ್ಪಿ ಒಣಗಿದ ಅಡಿಕೆ ಮರವು ತುಂಡಾಗಿ ತಲೆಯ ಮೇಲೆ ಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.