March 15, 2026
WhatsApp Image 2023-11-10 at 5.23.04 PM

ಪುತ್ತೂರು :  ಪುತ್ತಿಲ ಪರಿವಾರದ ಕಚೇರಿಗೆ ತಲ್ವಾರ್ ಹಿಡಿದು ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ 9 ಮಂದಿ ವಿರುದ್ದ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 9 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ದಿನೇಶ್ ಪಂಜಿಗಣ, ಭವಿತ್,ಮನ್ವಿತ್,ಜಯಪ್ರಕಾಶ್,ಚರಣ್,ಮನೀಶ್, ವಿನೀತ್ ಮತ್ತು ಇಬ್ಬರು ಅಪ್ರಾಪ್ತ ಬಾಲಕರು ಎಂದು ಗುರುತಿಸಲಾಗಿದೆ.

ದಿನೇಶ್ ಪಂಜಿಗ ಎಂಬಾತ ತಂಡದೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿದ್ದು, ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗ ಮನೀಶ್ ಕುಲಾಲ್ ಬನ್ನೂರು ಎಂಬವರನ್ನು ಗುರಿಯಾಗಿಟ್ಟುಗೊಂಡು ಬಂದಿದ್ದರು ಎಂದು ಆರೋಪಿಸಲಾಗಿದೆ. ಈ ವೇಳೆ ಪುತ್ತಿಲ ಕಚೇರಿಯಲ್ಲಿ ಕೃಷ್ಣಪ್ರಸಾದ್ ಶೆಟ್ಟಿ ಮತ್ತಿತರರು ಇದ್ದರು. ಮನೀಶ್ ಕುಲಾಲ್ ಕಚೇರಿಯಲ್ಲಿ ಇರಲಿಲ್ಲ. ಮಾಹಿತಿ ತಿಳಿದ ಮನೀಶ್ ಕುಲಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು.

 

ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ: 108/2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

 

About The Author

Leave a Reply

Your email address will not be published. Required fields are marked *

You cannot copy content of this page.