ಸುರತ್ಕಲ್: ಟೋಲ್ ಗೇಟ್ ಗೆ ಗುದ್ದಿ ಟ್ರಕ್‌ ಅಪಘಾತ – ಓರ್ವ ಗಾಯ

ಸುರತ್ಕಲ್: ಎನ್‌ಐಟಿಕೆ ಟೋಲ್ ಗೇಟ್ ನ ಅವಶೇಷಗಳಿಗೆ ಲಾರಿ ಡಿಕ್ಕಿ ಓರ್ವನಿಗೆ ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ತಡ ರಾತ್ರಿ 2.30ಕ್ಕೆ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಲಾರಿ ಡಿಕ್ಕಿ ಅಪಘಾತದ ತೀವ್ರತೆಗೆ ಟೋಲ್ ಗೇಟ್ ನ ಕಂಬ ಬುಡ ಸಮೇತ ಎದ್ದು ಬಂದಿದೆ.

ಟೋಲ್ ಬೂತ್ ನ ಒಂದು ಪಾಶ್ವ ಸಂಪೂರ್ಣ ಹಾನಿ ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.

ಈ ಸ್ಥಳ ಕತ್ತಲಲ್ಲಿ ದಿಢೀರ್ ಎದುರಾಗುವ ಅಪಘಾತದ ಸ್ಪಾಟ್ ಆಗಿದೆ. ಅಪಘಾತದಿಂದ ಕಂಬಗಳು ಜಾರಿ ಕುಸಿಯುವ ಭೀತಿ ಎದುರಾಗಿದೆ. ನಿರುಪಯುಕ್ತ ಟೋಲ್ ಗೇಟ್  ಜನಪ್ರತಿನಿಧಿಗಳು, ಜಿಲ್ಲಾಡಳಿತದ ನಿರ್ಲಕ್ಷ್ಯ, ಕರ್ತವ್ಯಲೋಪದಿಂದ ವಾಹನ ಸವಾರರ ಪಾಲಿಗೆ ಮಾರಣಾಂತಿಕವಾಗಿದೆ.

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.