March 20, 2026
WhatsApp Image 2025-10-11 at 3.33.58 PM

ಉಡುಪಿ: ಕಳೆದ 14ವರ್ಷಗಳ ಹಿಂದೆ ದತ್ತು ಕೇಂದ್ರದಿಂದ ನಾಪತ್ತೆಯಾಗಿದ್ದ ವಿಶೇಷ ಚೇತನ ಬಾಲಕನನ್ನು ಪತ್ತೆ ಹಚ್ಚುವಲ್ಲಿ ಉಡುಪಿ ಪೊಲೀಸರ ವಿಶೇಷ ತಂಡ ಯಶಸ್ವಿಯಾಗಿದೆ.

ಉಡುಪಿ ಸಂತೆಕಟ್ಟೆಯಲ್ಲಿರುವ ಶ್ರೀಕೃಷ್ಣಾನುಗ್ರಹ ದತ್ತು ಸ್ವಿಕಾರ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿದ್ದ ಸಂತೋಷ (12) ಎಂಬ ಬುದ್ದಿ ಮಾಂದ್ಯ ಬಾಲಕ 2011ರ ಫೆ.23ರಂದು ರಾತ್ರಿ ಸಂಸ್ಥೆಯಿಂದ ನಾಪತ್ತೆಯಾಗಿದ್ದನು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ತನಿಖೆಯ ಪತ್ತೆ ಬಗ್ಗೆ ವಿಶೇಷ ತಂಡವನ್ನು ರಚಿಸಲಾಗಿದ್ದು, ಈ ತಂಡವು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಪ್ರಸ್ತುತ ಕಾರ್ಕಳದ ವಿಜೇತ ವಿಶೇಷ ಮಕ್ಕಳ ಶಾಲೆಯಲ್ಲಿ 2018ರಿಂದ ಆಶ್ರಯ ಪಡೆದಿರುವ ಬಿಪಿನ್ ಎಂಬ ಹೆಸರಿನ ಹುಡುಗ, ನಾಪತ್ತೆಯಾಗಿದ್ದ ಸಂತೋಷನಿಗೆ ಹೋಲಿಕೆಯಾಗುತ್ತಿರುವುದು ಕಂಡುಬಂತು.

ಈ ಬಗ್ಗೆ ಅವನ ಮುಖ ಚಹರೆ, ಈಗಿನ ಅಂದಾಜು ಪ್ರಾಯ, ಕುಳಿತುಕೊಳ್ಳುವ ಭಂಗಿ, ಸಂಪೂರ್ಣ ಚಲನವಲನದ ಬಗ್ಗೆ ಖಚಿತಪಡೆಸಿಕೊಂಡು, ದೂರುದಾರೆ ಮೆರಿನಾ ಎಲಿಜಬೆತ್ ಹಾಗೂ ಸಂತೋಷ ಕಾಣೆಯಾದ ಸಮಯದಲ್ಲಿ ಆ ಸಂಸ್ಥೆನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಸಿಬ್ಬಂದಿ ಶಾಂತಿ ಜೊತೆಯಾಗಿ ವಿಜೇತ ವಿಶೇಷ ಮಕ್ಕಳ ಶಾಲೆಗೆ ತೆರಳಿ ನೋಡಿದಾಗ ಈತನೇ ಸಂತೋಷ ಎಂಬುದಾಗಿ ದೃಢಪಟ್ಟಿತು.

ಬಾಲಕನು ಬುದ್ದಿ ಮಾಂಧ್ಯನಾಗಿರುವುದರಿಂದ ಅವನ ಪೋಷಕರು ಪತ್ತೆಯಾಗುವ ತನಕ ವಿಜೇತ ವಿಶೇಷ ಮಕ್ಕಳ ಶಾಲೆಯಲ್ಲಿಯೇ ಪಾಲನೆ ಮಾಡುವ ಬಗ್ಗೆ ಉಡುಪಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ನೀಡಿದ ಸಲಹೆಯಂತೆ ಆತನನ್ನು ಕಾರ್ಕಳದ ವಿಜೇತ ವಿಶೇಷ ಮಕ್ಕಳ ಶಾಲೆಯಲ್ಲಿಯೇ ಇರಿಸಲಾಗಿದೆ.

ಈ ಪತ್ತೆ ತಂಡದಲ್ಲಿ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಎಸ್ಸೆಗಳಾದ ಸುದರ್ಶನ ದೊಡಮನಿ, ಈರಣ್ಣ ಶಿರಗುಂಪಿ, ಸಿಬ್ಬಂದಿ ಇಮ್ರಾನ್, ಚೇತನ್, ಸಂತೋಷ ದೇವಾಡಿಗ, ಮಲ್ಲಯ್ಯ ಹಿರೇಮಠ ಇದ್ದರು.

About The Author

Leave a Reply

Your email address will not be published. Required fields are marked *

You cannot copy content of this page.