ಬಂಟ್ವಾಳ: ಭಜರಂಗದಳದ ಮುಖಂಡನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

ಬಂಟ್ವಾಳ: ಬಜರಂಗದಳದ ಮುಖಂಡನೋರ್ವನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಪಾಣೆಮಂಗಳೂರು ಹಳೆ ಸೇತುವೆ ಬಳಿ ನಡೆದಿದೆ.

ಸಜೀಪ ನಿವಾಸಿ ರಾಜೇಶ್ ಪೂಜಾರಿ ಸಾವನ್ನಪ್ಪಿದವರು.
ರಾಜೇಶ್ ಪೂಜಾರಿ ಬಜರಂಗದಳದ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ಆಗಿದ್ದರು ಎಂದು ತಿಳಿದುಬಂದಿದೆ.

ಯುವಕ ನದಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಮುಸ್ಲಿಮ್ ಯುವಕರ ತಂಡ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಕಾರದೊಂದಿಗೆ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿದೆ.

ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.ಇದು ಆತ್ಮಹತ್ಯೆಯೋ? ಅಥವಾ ಅಪಘಾತವೋ? ಎಂಬುವುದು ತಿಳಿದು ಬರಬೇಕಿದೆ.

Check Also

ಮಂಗಳೂರು: ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ..!!

ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ …

Leave a Reply

Your email address will not be published. Required fields are marked *

You cannot copy content of this page.