ಜುಲೈ 17 ರಿಂದ 25 ರ ವರೆಗೆ ಉಡುಪಿಯಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ

ಉಡುಪಿ, ಜುಲೈ 12 : ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಯು ಜುಲೈ 17 ರಿಂದ 25 ರ ವರೆಗೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು, ಅಭ್ಯರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ತಿಳಿಸಿದರು. ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇನಾ ನೇಮಕಾತಿ ರ‍್ಯಾಲಿ ಕುರಿತು ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಸೇನಾ ನೇಮಕಾತಿ ರ‍್ಯಾಲಿಗೆ ಈಗಾಗಲೇ ಆನ್‌ಲೈನ್ ಮೂಲಕ ಹೆಸರು ನೊಂದಾಯಿಸಿಕೊ0ಡಿರುವ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಲಿದ್ದು, ರ‍್ಯಾಲಿಗೆ ಇದುವರೆಗೆ 6,800 ಕ್ಕೂ ಅಧಿಕ ಮಂದಿ ನೊಂದಣಿ ಮಾಡಿಕೊಂಡಿದ್ದಾರೆ ಎಂದರು.

Check Also

ಮಣಿಪಾಲ: ಪರೀಕ್ಷೆಯಲ್ಲಿ ಅನುತ್ತೀರ್ಣ – ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಮಣಿಪಾಲ: 10 ನೇ ತರಗತಿಯ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.ಮೃತ ಬಾಲಕನನ್ನು ಕಾಪು …

Leave a Reply

Your email address will not be published. Required fields are marked *

You cannot copy content of this page.