ಕಾಪು: ಬ್ಯಾರಿಕೇಡ್‌ಗೆ ಸ್ಕೂಟಿ ಡಿಕ್ಕಿ: ಮಂಗಳೂರಿನ ಯುವತಿ ಮೃತ್ಯು..!

ಉಡುಪಿ : ಬ್ಯಾರಿಗೇಟಿಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಕೂಟಿಯ ಹಿಂಬದಿಯಲ್ಲಿದ್ದ ಕುಳಿತಿದ್ದ ಯುವತಿ ಸಾವನ್ನಪ್ಪಿ, ಸವಾರ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟುವಿನಲ್ಲಿ ನಡೆದಿದೆ.

ರೋಶಿನಿ ಡಿಸೋಜ ಸಾವನ್ನಪ್ಪಿದ ಯುವತಿ.

ರೋಶಿನಿ ತನಗೆ ವಿವಾಹ ನಿಶ್ಚಯವಾಗಿದ್ದ ಯುವಕ ಜೊಯೇಲ್ ಎಂಬವರ ಜೊತೆ ಮಂಗಳೂರಿನಿಂದ ಕಲ್ಮಾಡಿ ಚರ್ಚಿಗೆ ಭೇಟಿ ನೀಡಿ ಮಂಗಳೂರಿಗೆ ವಾಪಾಸಾಗುತ್ತಿದ್ದ ವೇಳೆ ಕಟಪಾಡಿ ಸಮೀಪದ ಮೂಡಬೆಟ್ಟು  ಬಳಿ ರಸ್ತೆಯ ಬಲಬದಿಯಲ್ಲಿ ಡಿವೈಡರ್‌ ಪಕ್ಕದಲ್ಲಿ ಸ್ಕೂಟಿ ಚಲಾಯಿಸುತ್ತಿದ್ದಾಗ  ಉಡುಪಿ ಕಡೆಯಿಂದ ಬಂದ ಬಸ್ಸಿನ ಚಾಲಕನು ತನ್ನ ಬಸ್ಸನ್ನು ಅತೀ ವೇಗ ಹಾಗೂ ನಿಲ೯ಕ್ಷ್ಯತನದಿಂದ ಚಲಾಯಿಸಿಕೊಂಡು ರಸ್ತೆಯ ಎಡಬದಿಯಲ್ಲಿ ಹೋಗುತ್ತಿದ್ದು ಏಕಾಏಕಿಯಾಗಿ ಬಸ್ಸನ್ನು ರಸ್ತೆಯ ಬಲಬದಿಗೆ ಚಲಾಯಿಸಿಕೊಂಡು ಬಂದು ಸ್ಕೂಟಿ ಹಿಂದೆ ಕುಳಿತಿದ್ದ ರೋಶನಿಯವರ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದು ಬಸ್ಸನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.

ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ರೋಶನಿ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗಳಾಗಿತ್ತು, ತಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದರೂ ದಾರಿ ಮಧ್ಯೆ ಮೃತರಾಗಿದ್ದಾರೆ .

ಕಳೆದ ಒಂದು ವಾರದಿಂದ ಕಟಪಾಡಿ ಬದಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು ಈ ಕಾಮಗಾರಿಯು ಅರ್ಧಂಬರ್ಧವಾಗಿದ್ದು ಸರಿಯಾದ ಯಾವುದೇ ನಾಮಫಲಕ ಅಳವಡಿಸದ ಪರಿಣಾಮವಾಗಿ ಹೆದ್ದಾರಿಯಲ್ಲಿ ದಿನೇ ದಿನೇ ಅಪಘಾತಗಳು ಹೆಚ್ಚಾಗುತ್ತಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಇನ್ನೂ ಕೂಡ ಕ್ರಮ ಕೈಗೊಳ್ಳದೆ ಇರುವುದರಿಂದ ಈ ರೀತಿಯ ಅನಾಹುತಗಳು ಸಂಭವಿಸುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಉಪ್ಪಿನಂಗಡಿ: ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ -ಪ್ರಕರಣ ದಾಖಲು

ಉಪ್ಪಿನಂಗಡಿ ಸಮೀಪ ಕರಾಯ ಗ್ರಾಮದ ಬದ್ಯಾರು ಎಂಬಲ್ಲಿ ಮಹಿಳೆಯೊಬ್ಬರೇ ಇದ್ದ ಮನೆಗೆ ನೀರು ಕೇಳಿಕೊಂಡು ಬಂದ ಅಪರಿಚಿತ ಗಂಡಸು ಮತ್ತು …

Leave a Reply

Your email address will not be published. Required fields are marked *

You cannot copy content of this page.