ಉಡುಪಿ: ಬಸ್ ನ ಚಕ್ರಕ್ಕೆ ಸಿಲುಕಿ ಬಸ್‌ ಮಾಲಕ ‘ದಯಾನಂದ ಶೆಟ್ಟಿ’ ಮೃತ್ಯು

ಮಣಿಪಾಲ: ಬಸ್ ಮಾಲಕನೇ ಗ್ಯಾರೇಜ್ ಒಂದರಲ್ಲಿ ಬಸ್ ನ ಅಡಿಗೆ ಬಿದ್ದು ಮೃತಪಟ್ಟ ಘಟನೆ ಮಣಿಪಾಲದ ಬಡಗಬೆಟ್ಟುವಿನಲ್ಲಿ ಸಂಭವಿಸಿದೆ. ಅವಘಡದಲ್ಲಿ ಮೃತಪಟ್ಟವರನ್ನು ಉಡುಪಿ ಮಾಂಡವಿ ಬಸ್‌ನ ಮಾಲಕ ದಯಾನಂದ ಶೆಟ್ಟಿ (65) ಎಂದು ತಿಳಿದುಬಂದಿದೆ.ಇವರು ತಮ್ಮ ಬಸ್‌ನ್ನು 80 ಬಡಗಬೆಟ್ಟು ಬಳಿಯ ಗ್ಯಾರೇಜ್‌ನಲ್ಲಿ ರಿಪೇರಿಗೆ ನೀಡಿದ್ದರು. ಇದನ್ನು ನೋಡಲು ಬಂದಿದ್ದ ಈ ಸಂದರ್ಭದಲ್ಲಿ ಮೆಕ್ಯಾನಿಕ್ ಬಸ್‌ನ್ನು ಒಮ್ಮಿಂದೊಮ್ಮಲೆ ಚಲಾಯಿಸಿದ್ದರು. ಆಗ ಬಸ್‌ನ ಎದುರು ಇದ್ದ ದಯಾನಂದ ಅವರು ಬಸ್ ನ ಎದುರಿನ ಚಕ್ರಕ್ಕೆ ಸಿಲುಕಿದ್ದರು ಎನ್ನಲಾಗಿದೆ. ಅವಘಡದಲ್ಲಿ ದಯಾನಂದ ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Check Also

ಮಣಿಪಾಲ: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ..! ಸ್ಥಳೀಯರಲ್ಲಿ ಆತಂಕ

ಮಣಿಪಾಲ: ಉಡುಪಿ ನಗರದ ಮಣಿಪಾಲದ ಬಳಿಯ ಪೆರಂಪಳ್ಳಿಯ ಮನೆಯೊಂದರ ಅಂಗಳದಲ್ಲಿ ಶುಕ್ರವಾರ ರಾತ್ರಿ ಚಿರತೆ ಸಂಚಾರ ಕಂಡು ಬಂದಿದ್ದು, ಘಟನೆ …

Leave a Reply

Your email address will not be published. Required fields are marked *

You cannot copy content of this page.