![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಬೆಳ್ತಂಗಡಿ: ದಲಿತ ಯುವಕ ಶ್ರೀಧರ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಶಿಬಾಜೆಯ ತಿಮ್ಮಪ್ಪ, ಲಕ್ಷ್ಮಣ, ಆನಂದ ಗೌಡ, ಹಾಗೂ ಮಹೇಶ್ ಪೂಜಾರಿ ಬಂಧಿತ ಆರೋಪಿಗಳು.
ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ಮೂಡಿಗೆರೆಯ ಶ್ರೀಧರ ಎಂಬವರ ಮೃತದೇಹ ಕಳೆದ ಡಿ. 18ರಂದು ಕೆಲಸ ಮಾಡುವ ತೋಟದ ಮೂಲೆಯಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದಿತ್ತು.ಇದೊಂದು ಕೊಲೆ ಎಂದು ದೂರು ದಾಖಲಾಗಿತ್ತು.