BREAKING NEWS: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಪೋಟಕ್ಕೆ ತಮಿಳುನಾಡು ಲಿಂಕ್‌ : ತಿರುಪ್ಪೂರಲ್ಲಿ ಇಬ್ಬರನ್ನ ಬಂಧಿಸಿದ NIA

ಮಂಗಳೂರು : ಮಂಗಳೂರಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಪೋಟ ದಿನದಿಂದ ದಿನಕ್ಕೆ ತಿರುವುಪಡೆದುಕೊಳ್ಳುತ್ತಿದ್ದು, ಪ್ರಕರಣಕ್ಕೆ ತಮಿಳುನಾಡು ಲಿಂಕ್‌ ಹಿನ್ನೆಲೆ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ ನಡೆಸಿ, ಇಬ್ಬರ ಬಂಧಿಸಿದ್ದಾರೆ

ಇಂದು ಬೆಳ್ಳಂಬೆಳಗ್ಗೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿ, ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಕೇಸ್‌ ಸಂಬಂಧಿಸಿದ ಇಬ್ಬರ ಮನೆಯಲ್ಲಿ 5 ಗಂಟೆಗಳ ಕಾಲ ಶೋಧ ಕಾರ್ಯಚಾರಣೆ ನಡೆಸಿ ಬಳಿ ಬಂಧಿಸಿದ್ದಾರೆ.

ನ.19 ರಂದು ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ಹಾಗೂ ಆಟೋ ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ಶಾರೀಕ್‌ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ಪ್ರಕರಣ ಸಂಬಂಧ ತಮಿಳುನಾಡು ಲಿಂಕ್‌ ಪತ್ತೆಯಾದ ಬೆನ್ನಲೆ ಇಂದು ಎನ್‌ಐಎ ದಾಳಿ ಇಬ್ಬರ ಅರೆಸ್ಟ್‌ ಮಾಡಿದ್ದಾರೆ.

Check Also

ಸುಳ್ಯ: ಪಯಸ್ವಿನಿ ನದಿಯಲ್ಲಿ ಮೀನುಗಳ ಮಾರಣ ಹೋಮ

ಸುಳ್ಯ: ಸುಳ್ಯ ಪಯಸ್ವಿನಿ ನದಿಯಲ್ಲಿನ ಗುಂಡಿಗಳಲ್ಲಿ ನೀರಿಗೆ ವಿಷ ಬೆರೆಸಿ ಮೀನು ಹಿಡಿಯುವ ಕಿಡಿಗೇಡಿಗಳು ಮೀನುಗಳ ಮಾರಣ ಹೋಮ ನಡೆಸುತ್ತಿರುವ …

Leave a Reply

Your email address will not be published. Required fields are marked *

You cannot copy content of this page.