March 5, 2026
WhatsApp Image 2023-06-16 at 12.53.52 PM

ಸುರತ್ಕಲ್;ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಜನತಾ ಕಾಲನಿಯಲ್ಲಿ ರಾತ್ರಿ ನಡೆದಿದೆ.

ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ ಪರಿಸರದ ತ್ವಾಹಿರ್ (24) ಚೂರಿಯಿಂದ ಇರಿದ ಆರೋಪಿಯಾಗಿದ್ದಾನೆ.

ಗುರುವಾರ ರಾತ್ರಿ ಕಾಲನಿ ಮಸೀದಿಯ ಬಳಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಡಿಕೊಂಡಿದ್ದಾರೆ.ಬಳಿಕ ತ್ವಾಹಿರ್ ಕಾರಿನಲ್ಲಿ ತಂದಿದ್ದ ಚೂರಿಯಿಂದ ತನಗೆ ಚುಚ್ಚಿದ್ದಾನೆ ಎಂದು ಹಲ್ಲೆಗೊಳಗಾದ ಶಾಫಿ ಆರೋಪಿಸಿದ್ದಾರೆ.

ಚೂರಿ ಇರಿತದಿಂದ ಶಾಫಿಯ ಕೈ ಮತ್ತು ಬೆನ್ನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.