ಪುತ್ತೂರು: ಯುವತಿಯೋರ್ವಳಿಗೆ ಚೂರಿ ಇರಿದ ಘಟನೆ ಮುಂಡೂರಿನಲ್ಲಿ ನಡೆದಿದ್ದು , ಯುವತಿ ಮೃತಪಟ್ಟಿದ್ದಳು.
ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಸಂಪ್ಯ ಪೊಲೀಸರು ವಶಕ್ಕೆ ಪಡೆದಿದ್ದು , ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಜಯಶ್ರೀ ಈ ಮೊದಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲ ಸಮಯದಿಂದ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದಳು ಎಂದು ತಿಳಿದು ಬಂದಿದೆ.ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುದು ತನಿಖೆಯ ನಂತರ ತಿಳಿಯಬೇಕಿದೆ.