

ಕುಂದಾಪುರ: ಪಿಕ್ಅಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮಹಿಳೆ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮರವಂತೆ ಗ್ರಾಮದ ಸೀ ಲ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಬಳಿ ಭಾನುವಾರ ನಡೆದಿದೆ.
ಮೃತ ಮಹಿಳೆಯನ್ನು ಯಳಜಿತ್ ಗ್ರಾಮದ ಬಾಬು ಎಂಬವರ ಪತ್ನಿ ಲಕ್ಷ್ಮೀ(45) ಎಂದು ಗುರುತಿಸಲಾಗಿದೆ.
ಕುಂದಾಪುರ-ಬೈಂದೂರು ಕಡೆಯ ಏಕಮುಖ ರಸ್ತೆಯಲ್ಲಿ ಪಿಕ್ ಅಪ್ ವಾಹನ ಅತೀ ವೇಗದಿಂದ ಬಂದು ಲಕ್ಷ್ಮೀ ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಲಕ್ಷ್ಮೀ ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.