![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಮಣಿಪಾಲ: ಗಾಂಜಾ ಸೇವನೆಗೈದ ಐವರು ವಿದ್ಯಾರ್ಥಿಗಳನ್ನು ಹಯಗ್ರೀವ ನಗರ 5 ನೇ ಕ್ರಾಸ್ ಬಳಿ ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಣಿಪಾಲದ ವಿದ್ಯಾರ್ಥಿಗಳಾದ ಅಶೀಲ (20), ರೆನಜೋ ಎಸ್. ಚಂದ್ರಗಿರಿ(20), ಅಭಿನವ ಸುರೇಶ್(20), ಶ್ರೀಹರಿ(19), ಅಭಿಜಿತ್(20) ಎಂಬವರನ್ನು ವಶಕ್ಕೆ ಪಡೆದ ಪೊಲೀಸರು, ಮಣಿಪಾಲ ಕೆಎಂಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು ಆ ವರದಿಯಲ್ಲಿ ಇವರೆಲ್ಲ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.