June 1, 2025 6:25:43 PM
WhatsApp Image 2023-10-17 at 8.47.56 AM

ಉಡುಪಿ: ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಸಮುದ್ರದಲ್ಲಿ ಚಂಡಮಾರುತ ಬೀಸುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ (ಅ.20ರವರೆಗೆ) ಕರಾವಳಿ ಸಮುದ್ರದ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಎಚ್ಚರಿಕೆ ನೀಡಿದ್ದಾರೆ.

ಚಂಡಮಾರುತದ ಅವಧಿಯಲ್ಲಿ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಲಿದ್ದು, ಗಾಳಿಯ ವೇಗವು ಗಂಟೆಗೆ 40-45ರಿಂದ 55ಕಿ.ಮೀ. ಇರುವುದರಿಂದ ಸಮುದ್ರ ಪ್ರಕ್ಷುಬ್ಧಗೊಳ್ಳಲಿದೆ. ಹೀಗಾಗಿ ಸಮುದ್ರ ತೀರದಲ್ಲಿ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾವುದೇ ತುರ್ತು ಸಂದರ್ಭದಲ್ಲಿ ಸೇವೆಗಾಗಿ ಶುಲ್ಕ ರಹಿತ:1077 ಅಥವಾ ದೂರವಾಣಿ ಸಂಖ್ಯೆ:0820-2574802ನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>