May 30, 2025 5:49:55 AM
WhatsApp Image 2023-10-18 at 10.19.21 AM

ಸುರತ್ಕಲ್: ಯುವಕನೋರ್ವನಿಗೆ ಮೂವರ ತಂಡ ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ಮಂಗಳೂರು ನಗರದ ಹೊರವಲಯದ ಬೆಂಗ್ರೆಯಲ್ಲಿ ನಡೆದಿದೆ. ಬೆಂಗ್ರೆ ನಿವಾಸಿ ಮುಹಮ್ಮದ್ ಅಕ್ರಂ ಚೂರಿ ಇರಿತಕ್ಕೊಳಗಾದ ಯುವಕ. ಹಲ್ಲೆ ನಡೆಸಿದ ಆರೋಪಿಗಳನ್ನ ಸ್ಥಳೀಯರಾದ ಸಮದ್‌, ಇಜಾಝ್ ಮತ್ತು ಇರ್ಫಾನ್ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಮುಹಮ್ಮದ್ ಅಕ್ರಂರನ್ನು ಸ್ಥಳೀಯರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಳೆಯ ದ್ವೇಷದ ಪ್ರತಿಕಾರವಾಗಿ ಕೊಲೆಗೈಯ್ಯುವ ಉದ್ದೇಶದಿಂದ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಅಕ್ರಂ ನೀಡಿರುವ ಪೊಲೀಸ್‌ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>