
ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ ಎಂಬ ಸುದ್ದಿ ಭಾರಿ ಗೊಂದಲ ಉಂಟು ಮಾಡಿ ಕೊನೆಗೆ ಶವಗಾರಾದಲ್ಲಿ ಹೆಣ ಸಿಗದೆ ವ್ಯಕ್ತಿ ಇನ್ನೂ ಬದುಕಿದ್ದಾರೆ ಎಂಬ ಸುದ್ದಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಶೇಖರ್ ಗೌಡ ಅವರು ವೆಂಕಪ್ಪ ಗೌಡ ಎಂಬವರ ಮನೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದು, ಜೂನ್ 9ರಂದು ಸ್ಥಳೀಯ ಪೇಟೆಗೆ ಹೋದಾಗ ಮೆದುಳು ನರದ ಸಮಸ್ಯೆಯಿಂದ ಅನಾರೋಗ್ಯಕ್ಕೊಳಗಾಗಿ ಬಿದ್ದರು. ತಕ್ಷಣ ಅವರನ್ನು ಆಟೋ ರಿಕ್ಷಾದವರು ವೆಂಕಪ್ಪ ಗೌಡರಲ್ಲಿಗೆ ಕರೆತಂದಿದ್ದು, ವೆಂಕಪ್ಪ ಗೌಡರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆರೋಗ್ಯದಲ್ಲಿ ಸುಧಾರಣೆಯಾಗದ ಕಾರಣ ಜೂನ್ 15ರಂದು ವೆನ್ಲಾಕ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.
