ಲಲಿತಾ ಪಂಚಮಿ- ಕಟೀಲು ಕ್ಷೇತ್ರದಲ್ಲಿ ಮಹಿಳಾ ಭಕ್ತರಿಗೆ ವಿತರಿಸಲು 20 ಸಾವಿರ ಶೇಷ ವಸ್ತ್ರ

ಕಟೀಲು: ನವರಾತ್ರಿ ಮಹೋತ್ಸವ ಶುಭ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಾ ಪಂಚಮಿ ಆಚರಣೆ ನಡೆದಿದ್ದು, ಇಂದು ಮುಂಜಾನೆಯಿಂದಲೇ ಸಾವಿರಾರು ಮಂದಿ ಭಕ್ತರು ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದರು.ದೇಗುಲದಲ್ಲಿ ಚಂಡಿಕಾ ಹೋಮ, ವಿವಿಧ ಸೇವೆಗಳು ನಡೆಯುತ್ತಿದ್ದು, ರಾತ್ರಿ ಅನ್ನಪ್ರಸಾದ ಸ್ವೀಕರಿಸುವ ಮಹಿಳಾ ಭಕ್ತರಿಗೆ ದೇವರ ಶೇಷ ವಸ್ತ್ರ ವಿತರಿಸಲಾಗುತ್ತದೆ, ಈಗಾಗಲೇ ಸುಮಾರು ‌20 ಸಾವಿರ ಶೇಷವಸ್ತ್ರಗಳನ್ನು ವಿತರಿಸಲು ಸಿದ್ಧತೆ ಮಾಡಿ‌ ಕೊಳ್ಳಲಾಗಿದೆ.

ಸಂಜೆಯಿಂದಲೇ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಜನಸಂದಣಿಯನ್ನು ನಿಭಾಯಿಸಲು ಸರತಿ ಸಾಲಿನ ವ್ಯವಸ್ಥೆ ಕಲ್ಪಿಸಲಾಗಿದೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.