May 31, 2025 9:21:45 AM
WhatsApp Image 2023-02-20 at 12.57.17 PM

ಬೆಂಗಳೂರು: ಸ್ವಂತ ಅಳಿಯನನ್ನೇ ಕಿಡ್ನ್ಯಾಪ್‌ ಮಾಡಿಸಿದ್ದಾರೆ ಅನ್ನೋ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ವಂತ ಅಳಿಯನನ್ನೇ ಕಿಡ್ನ್ಯಾಪ್‌ ಮಾಡಿಸಿದ್ದರು ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನಸಿಕ ಅಸ್ವಸ್ಥನೆಂದು ಬಿಂಬಿಸಲು ಪ್ರಯತ್ನಿಸಿದ್ದರು ಎಂದು ಅಳಿಯ ನವೀನ್‌ಗೌಡ ದೂರು ನೀಡಿದ್ದರು. ದೂರನ್ನಾಧರಿಸಿ ದಿವ್ಯಪ್ರಭಾ, ಮಗಳು ಸ್ಪಂದನಾ, ಪತಿ ಪರಶುರಾಮ್ ಸೇರಿ 6 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ದಿವ್ಯಪ್ರಭಾ ಮಗಳು ಸ್ಪಂದನಾರನ್ನ ಮದುವೆಯಾಗಿ ಕೌಟುಂಬಿಕ ಕಾರಣಗಳಿಂದ ದೂರವಾಗಿದ್ದೆ. ಸ್ಪಂದನಾಗೆ ಅಕ್ರಮ ಸಂಬಂಧವಿದೆ ಅಂತಾ ತಿಳಿದು, ಒಂದಿಷ್ಟು ಅಶ್ಲೀಲ ಚಾಟ್‌ಗಳನ್ನೂ ನೋಡಿದ್ದರಿಂದ ಕುಟುಂಬದಿಂದ ದೂರವಾಗಿದ್ದೆ. ಹಾಗಾಗಿ ದಿವ್ಯಾಪ್ರಭಾ ಮನೆಯಿಂದಲೇ ನನ್ನನ್ನ ಕಿಡ್ನ್ಯಾಪ್‌ ಮಾಡಿಸಿದ್ರು. ನಂತರ ಜೆ.ಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನಸಿಕ ಅಸ್ವಸ್ಥನೆಂದು ಬಿಂಬಿಸಲು ಪ್ರಯತ್ನಪಟ್ಟಿದ್ದರು ಎಂದು ನವೀನ್‌ಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>