May 29, 2025 7:26:20 PM
WhatsApp Image 2023-02-20 at 9.01.58 AM

ಕಡಬ: ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಕಾಡಂಚಿನ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾಡನೆ ದಾಳಿ ನಡೆಸಿದ್ದು ಯುವತಿ ಸಹಿತ ಇಬ್ಬರು ಮೃತಪಟ್ಟಿದ್ದಾರೆ.

ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ(21) ಎಂಬವರು ಸೊಸೈಟಿ ಗೆ ಮನೆಯಿಂದ ಕಾಡಂಚಿನ ದಾರಿಯಲ್ಲಿ ಹೋಗುತ್ತಿದ್ದ ವೇಳೆ ನೈಲ ಎಂಬಲ್ಲಿ ಆನೆ ದಾಳಿ ನಡೆಸಿದೆ.

ಯುವತಿ ಬೊಬ್ಬೆ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯ ನಿವಾಸಿ ರಮೇಶ್ ರೈ ಎಂಬವರ ಮೇಲೆ ಆನೆ ಅಟ್ಟಹಾಸ ಮೆರೆದಿದೆ. ರಮೇಶ್ ರೈ (55) ಸ್ಥಳದಲ್ಲಿ ಮೃತಪಟ್ಟರೆ ರಂಜಿತ ಅವರು ನೆಲ್ಯಾಡಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ .

About The Author

Leave a Reply

Your email address will not be published. Required fields are marked *

<p>You cannot copy content of this page.</p>