May 11, 2025
WhatsApp Image 2024-04-20 at 9.13.21 AM

ಬಜ್ಪೆ: ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿ ಬಳಿಕ ಸರಣಿಯಾಗಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಎಡಪದವು ಪೇಟೆಯಲ್ಲಿ ನಡೆದಿದೆ. ಎಡಪದವು ರಾಮಮಂದಿರ ಬಳಿ ಮಣ್ಣಿನ ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತವಾಗಿದ್ದು, ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿ ಈ ಘಟನೆ ಸಂಭವಿಸಿದೆ.ಲಾರಿ ನಿಲ್ಲಿಸಲು ಆಗದೆ ಚಾಲಕ, ಸುಮಾರು 500 ಮೀಟರ್ ದೂರದ ವರೆಗೂ ಲಾರಿಯನ್ನು ನಿಯಂತ್ರಿಸುವ ಪ್ರಯತ್ನ ಮಾಡಿದ್ದಾನೆ. ಆದರೆ,ರಸ್ತೆಯಲ್ಲಿ ಸರಣಿ ಅಪಘಾತ ನಡೆದಿದ್ದು, ಮೊದಲಿಗೆ ಎದುರಿಗೆ ಸಿಕ್ಕ ಸ್ವಿಫ್ಟ್ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸಂಪೂರ್ಣ ಕಾರು‌ ಜಖಂಗೊಂಡಿದ್ದು, ಕಾರಿನಲ್ಲಿದ್ದವರಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಳಿಕ ಮುಂದೆ ಚಲಿಸಿದ ಲಾರಿ, ಎಣ್ಣೆ ಪೂರೈಕೆ ಮಾಡುತ್ತಿದ್ದ ಪಿಕ್ಅಫ್ ವಾಹನಕ್ಕೆ ಡಿಕ್ಕಿಯಾಗಿದ್ದು, ರಸ್ತೆಗೆ ಪಿಕ್ ಅಪ್ ಉರುಳಿ ಬಿದ್ದ ಕಾರಣ ಎಣ್ಣೆ ಪ್ಯಾಕೆಟ್​ಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದಿವೆ. ನಂತರ ಎದುರಿನಿಂದ ಬಂದ ಟ್ಯಾಂಕರ್​ವೊಂದು, ಲಾರಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದರೆ, ಬಳಿಕ ಎಡಪದವು ಪೇಟೆಯ ಬಳಿ ಖಾಸಗಿ ಬಸ್​ಗೆ​ ಡಿಕ್ಕಿ ಹೊಡೆದು ಲಾರಿ ನಿಂತಿದೆ.

ಮೂಡಬಿದ್ರೆಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸರಣಿ ಅಪಘಾತದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ನಾಲ್ಕು ದ್ವಿಚಕ್ರ ವಾಹನಗಳು ಹಾಗೂ ಮೂರು ಅಂಗಡಿಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಬಜ್ಪೆ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ

About The Author

Leave a Reply

Your email address will not be published. Required fields are marked *

<p>You cannot copy content of this page.</p>