

ಮಣಿಪಾಲ: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮ ಈಗಾಗಲೇ ಆರಂಭವಾಗಿದ್ದು ಜೂನ್ ನಾಲ್ಕರವರೆಗೆ ನಡೆಯಲಿದ್ದು ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಕೃಷಿಕರಿಗೆ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ಜಿಲ್ಲೆಗೆ ಅಗತ್ಯವಿರುವ ಲಸಿಕೆ ಹಾಗೂ ಇನ್ನಿತರ ಸಾಮಾಗ್ರಿಗಳ ಬಗ್ಗೆ ದಾಸ್ತಾನಿದೆ. ಆದ್ದರಿಂದ ಜಾನುವಾರುಗಳಿಗೆ ಚರ್ಮಗಂಟು ರೋಗ ಲಸಿಕೆ ಹಾಕಬೇಕು. ಈ ಎರಡೂ ಲಸಿಕೆಗಳನ್ನು ಜಾನುವಾರುಗಳಿಗೆ ಹಾಕಿಸುವುದರ ಮುಖೇನ ಜಾನುವಾರುಗಳ ಉತ್ಪನ್ನ ಹೆಚ್ಚಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.
ಕಾಪು, ಉಡುಪಿ, ಹೆಬ್ರಿ, ಕುಂದಾಪುರ, ಬ್ರಹ್ಮಾವರ ಪಾಲಿ ಕ್ಲಿನಿಕ್ ನಲ್ಲಿ ತಲಾ ಒಂದರಂತೆ ಎಂಟು ಪಶು ಸಂಜೀವಿನಿ ಆ್ಯಂಬುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಿದೆ. ಆದ್ದರಿಂದ ಲಸಿಕೆ ಹಾಕಿಸಲು ಯಾವುದೇ ರೀತಿಯ ತೊಂದರೆಯಿಲ್ಲ. ಜಾನುವಾರುಗಳ ಬಗ್ಗೆ ನಿರ್ಲಕ್ಷ್ಯ ವಹಿಸದೆ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು ಎಂದು ಡಿಸಿ ಆದೇಶ ನೀಡಿದ್ದಾರೆ.