ಪುತ್ತೂರು: ಶ್ರೀರಾಮಚಂದ್ರನ ಕುರಿತು ಅವಹೇಳನ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಪ್ರೊ ಭಗವಾನ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆ ಮತ್ತು ಬಾಲಚಂದ್ರ ಸೊರಕೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾಮ ದಶರಥನ ಮಗನೇ ಅಲ್ಲ. ಪುರೋಹಿತನಿಗೆ ಹುಟ್ಟಿದವನು ಎಂದು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಗವಾನ್ ಅವರು ವಿವಾದಿತ ಹೇಳಿಕೆ ನೀಡಿದ್ದರು. ಇದರ ಜತೆಗೆ ರಾಮಾಯಾಣದ ಕುರಿತು ಅವಹೇಳನ ಮಾಡುವಂತಹ ಕೆಲವು ಹೇಳಿಕೆಗಳನ್ನು ಕೂಡ ನೀಡಿದ್ದರು. ಹಾಗಾಗಿ ಅವರ ಹೇಳಿಕೆ ಹಿಂದೂ ಸಮಾಜವನ್ನು ಕೆರಳಿಸುವಂತೆ ಮಾಡಿದೆ. ಹಾಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
Check Also
ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ
ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …