![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರನ್ನು ರವಿವಾರ ತಡ ರಾತ್ರಿ ಕುತ್ತಿಗೆ ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಅಪ್ರಾಪ್ತ ವಯಸ್ಸಿನ ಬಾಲಕನನ್ನು ನ್ಯಾಯಾಲಯಕ್ಕೆ ಹಾಜರುಪಡಿ ಸಲಾಗಿದ್ದು, ನ್ಯಾಯಾಲಯವು 15 ದಿನಗಳಾವಧಿಯ ರಿಮಾಂಡ್ ಹೋಮ್ ಗೆ ಕಳುಹಿಸಿದೆ. ಹೇಮಾವತಿ ಅವರ ಮನೆಯಲ್ಲಿ ಘಟನೆಯ ರಾತ್ರಿ ತಂಗಿದ್ದ ಅಕ್ಕನ ಮಗ, ಹತ್ತನೇ ತರಗತಿ ವಿದ್ಯಾರ್ಥಿ, ಅಪ್ರಾಪ್ತ ವಯಸ್ಸಿನ ಬಾಲಕ ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದು, ಇದಕ್ಕೆ ಹೇಮಾವತಿಯವರು ಪ್ರತಿರೋಧ ವ್ಯಕ್ತಪಡಿಸಿದ್ದರೆನ್ನಲಾಗಿದೆ. ಈ ವೇಳೆ ಆರೋಪಿ ಬಾಲಕ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಪೊಲೀಸ್ ತನಿಖೆ ವೇಳೆ ಬಾಲಕ ಬಾಯಿ ಬಿಟ್ಟಿರುವುದರಿಂದ ಆರೋಪಿಯನ್ನು ಬಂಧಿಸಲಾಗಿತ್ತು.