ಪುತ್ತೂರು: ಶ್ರೀರಾಮನ ವಿರುದ್ಧ ಅವಹೇಳನ – ಪ್ರೊ.ಭಗವಾನ್ ವಿರುದ್ಧ ದೂರು

ಪುತ್ತೂರು: ಶ್ರೀರಾಮಚಂದ್ರನ ಕುರಿತು ಅವಹೇಳನ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಪ್ರೊ ಭಗವಾನ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆ ಮತ್ತು ಬಾಲಚಂದ್ರ ಸೊರಕೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾಮ ದಶರಥನ ಮಗನೇ ಅಲ್ಲ. ಪುರೋಹಿತನಿಗೆ ಹುಟ್ಟಿದವನು ಎಂದು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಗವಾನ್ ಅವರು ವಿವಾದಿತ ಹೇಳಿಕೆ ನೀಡಿದ್ದರು. ಇದರ ಜತೆಗೆ ರಾಮಾಯಾಣದ ಕುರಿತು ಅವಹೇಳನ ಮಾಡುವಂತಹ ಕೆಲವು ಹೇಳಿಕೆಗಳನ್ನು ಕೂಡ ನೀಡಿದ್ದರು. ಹಾಗಾಗಿ ಅವರ ಹೇಳಿಕೆ ಹಿಂದೂ ಸಮಾಜವನ್ನು ಕೆರಳಿಸುವಂತೆ ಮಾಡಿದೆ. ಹಾಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ನಗರ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.