ಸುರತ್ಕಲ್: ಅಪಘಾತ ತಪ್ಪಿಸಲು ಯತ್ನಿಸಿ ಕಾರು ಟೆಲಿಫೋನ್ ಕಂಬಕ್ಕೆ ಡಿಕ್ಕಿ..!

ಸುರತ್ಕಲ್: ಅಪಘಾತ ತಪ್ಪಿಸಲು ಹೋಗಿ ಕಾರೊಂದು ಅಂಗಡಿಯ ಮುಂಭಾಗದ ತಗಡಿನ ಚಪ್ಪರ ಮತ್ತು ಟೆಲಿಫೋನ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡ ಕಾರು ಚಾಲಕನನ್ನು ಫರಾನ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿ ಹೋಗುತ್ತಿದ್ದ ಕಾರು ಸುರತ್ಕಲ್ ಪೇಟೆಯಲ್ಲಿ ಎದುರಿನಲ್ಲಿದ್ದ ಕಾರೊಂದು ಏಕಾಏಕಿ ಟರ್ನ್ ಮಾಡಿದ ಪರಿಣಾಮ ತೀರಾ ಎಡಭಾಗದಿಂದ ಬರುತ್ತಿದ್ದ ಕಾರಿನ ಚಾಲಕ ಫರಾನ್ ಬ್ರೇಕ್ ಹಾಕಿದ್ದಾರೆ. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ತೀರಾ ಎಡಭಾಗಕ್ಕೆ ತಿರುಗಿ ರಸ್ತೆಯ ಬದಿಯಲ್ಲಿದ್ದ ರಾಘವೇಂದ್ರ ಹೋಟೆಲ್ ನ ಹೊರಭಾಗದಲ್ಲಿ ಅಳವಡಿಸಿದ್ದ ತಗಡಿನ ಚಪ್ಪರಕ್ಕೆ ಡಿಕ್ಕಿಹೊಡೆದು ಬಳಿಕ ಎದುರಿಗಿದ್ದ ಟೆಲಿಫೋನ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಕೆಲವು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ

Check Also

ಮಣಿಪಾಲ: ವ್ಯಕ್ತಿಯೊಬ್ಬರ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ ಲಕ್ಷಾಂತರ ರೂ. ಹಣ ವರ್ಗಾವಣೆ

ಮಣಿಪಾಲ: ವ್ಯಕ್ತಿಯೊಬ್ಬರ ಖಾತೆಯಿಂದ ಮತ್ತೊಂದು ಖಾತೆಗೆ 2,08,004 ರೂ. ಹಣ ವರ್ಗಾವಣೆಗೊಂಡಿರುವ ಘಟನೆ ನಡೆದಿದೆ. ಕಾರ್ಕಳ ಪಳ್ಳಿ ನಿವಾಸಿ ಡಾ| ಗೋಪಿ ನಾಥ್‌ …

Leave a Reply

Your email address will not be published. Required fields are marked *

You cannot copy content of this page.