ಮೂಡಬಿದಿರೆ: ಮೊಬೈಲ್ ಕೊಡಲಿಲ್ಲ ಎಂದು ಅಪ್ರಾಪ್ತ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆ..!

ಮೂಡಬಿದಿರೆ; ಮೊಬೈಲ್ ಕೊಡಲಿಲ್ಲ ಎಂದು ಅಪ್ರಾಪ್ತ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಾಲ್ಪಾಡಿ ಗ್ರಾಮದ ನಾಗಂದಡ್ಡದಲ್ಲಿ ನಡೆದಿದೆ

ಉಮೇಶ್‌ ಪೂಜಾರಿ ಎಂಬವರ ಪುತ್ರಿ 10ನೇ ತರಗತಿ ವಿದ್ಯಾರ್ಥಿನಿ ಯುತಿ (15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.

ಆದಿತ್ಯವಾರ ಯತಿಯ ತಾಯಿ ಮತ್ತು ತಂಗಿ ಶಿರ್ತಾಡಿಗೆ ಹೊರಟಿದ್ದರು.ಆದರೆ ಯತಿ ಹೋಗಲು ನಿರಾಕರಿಸಿದ್ದು, ಮೊಬೈಲ್‌ ಕೊಡುವಂತೆ ತಾಯಿಯಲ್ಲಿ ಹೇಳಿದ್ದಾರೆ.ಆದರೆ ತಾಯಿ ಮೊಬೈಲ್ ಈಗ ಕೊಡುವುದಿಲ್ಲ, ಶಿರ್ತಾಡಿಯಿಂದ ವಾಪಸು ಬಂದ ಮೇಲೆ ಕೊಡುತ್ತೇನೆ ಎಂದು ಹೇಳಿ ಹೋಗಿದ್ದರು.

ಮಧ್ಯಾಹ್ನ ಮನೆಗೆ ವಾಪಸಾದಾಗ ಮನೆಯಲ್ಲಿ ಮಗಳು ಇರಲಿಲ್ಲ.ಹುಡುಕಾಡಿದಾಗ ಸಂಜೆ ವೇಳೆ ಮನೆ ಬಳಿ ಬಾವಿಯಲ್ಲಿ ಆಕೆಯ ಶವ ಪತ್ತೆಯಾಗಿತ್ತು‌.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.