![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಪುತ್ತೂರು : ಮಧ್ಯರಾತ್ರಿ ಪುತ್ತೂರಿನಲ್ಲಿ ಟಿಪ್ಪರ್ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ದರ್ಬೆಯ ಅಶ್ವಿನಿ ಸರ್ಕಲ್ ಎಂಬಲ್ಲಿ ಈ ಘಟನೆ ನಡೆದಿದ್ದು, ಅದೇ ರಸ್ತೆಯಲ್ಲಿ ಸಾಗುತಿದ್ದ ಹಿಂದೂ ಮುಖಂಡ ಅರುಣ್ ಪುತ್ತಿಲ ತಕ್ಷಣ ತಮ್ಮ ಕಾರಿನಲ್ಲಿ ಗಂಭೀರ ಗಾಯಗೊಂಡ ದಿವಾಕರ್ ಮಡಿವಾಳ ಎಂಬವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿದರು.
ಪುತ್ತಿಲ ಪರಿವಾರದ ಪ್ರಮುಖರಾದ ಮನೀಶ್ ಕುಲಾಲ್ ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿನ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ ಗಾಯಾಳುವನ್ನು ಮಂಗಳೂರಿಗೆ ಕರೆದುಕೊಂಡು ಹೋಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.