March 12, 2026
WhatsApp Image 2024-04-21 at 1.20.47 PM

ಕಾರ್ಕಳ : ರಾತ್ರಿ ವೇಳೆ ಕಾರ್ಕಳ ತಾಲೂಕಿನ ಕೆದಿಂಜೆಯಲ್ಲಿ ವಿದ್ಯುತ್‌ ಶಾಕ್‌ನಿಂದ ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಹಾವೇರಿ ಮೂಲದ ಅನಂತೇಶ್ವರ (29) ಎಂಬವರು ಮೃತಪಟ್ಟ ಘಟನೆ ಸಂಭವಿಸಿದೆ. ರಾತ್ರಿ 9 ಗಂಟೆ ವೇಳೆಗೆ ರಾಡ್‌ ಕಟ್ಟಿಂಗ್‌ ಕೆಲಸ ಮಾಡುತ್ತಿರುವ ವೇಳೆ ವಿದ್ಯುತ್‌ ಶಾಕ್‌ ಹೊಡೆದಿದೆ. ಸ್ಥಳೀಯರು ಅವರನ್ನು ತತ್‌ಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೂ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಾಕ್‌ಗೆ ಕಾರಣ ತಿಳಿದು ಬಂದಿಲ್ಲ. ಆದರೆ ಈ ವೇಳೆ ಪರಿಸರದಲ್ಲಿ ಮಳೆಯ ಜತೆ ಗುಡುಗು-ಮಿಂಚು ಕೂಡ ಬರುತ್ತಿತ್ತು ಎನ್ನಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.