February 18, 2025
WhatsApp Image 2024-09-21 at 11.18.57 AM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೀಗ ಕಾಲರಾ ರೋಗದ ಆತಂಕ ಸೃಷ್ಟಿಯಾಗಿದೆ. ಜಿಲ್ಲೆಯ ಓರ್ವ ವ್ಯಕ್ತಿಯಲ್ಲಿ ಕಾಲರಾ ಸೋಂಕು ಪತ್ತೆಯಾಗಿದೆ. ದ. ಕ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ವ್ಯಕ್ತಿಯೋರ್ವನಲ್ಲಿ ಸೋಂಕು ಪತ್ತೆಯಾಗಿದೆ.

ಉಡುಪಿ ಜಿಲ್ಲೆಯ ಹೊಸ್ಮಾರುವಿನ ಹೋಟೆಲ್ ನಿಂದ ಸೊಂಕು ಸಾಮೂಹಿಕವಾಗಿ ಹರಡಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನಲೆ  ದಕ್ಷಿಣ ಕನ್ನಡ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಇನ್ನು ದ. ಕ ಜಿಲ್ಲಾ ಅರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಮಾಹಿತಿ ನೀಡಿ, ಕಾಲರಾ ಸೋಂಕು ಪ್ರಮುಖವಾಗಿ ಕಲುಷಿತ ಆಹಾರದಿಂದ ಹರಡುವ ಸಾಧ್ಯತೆ ಇದೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೋಟೆಲ್ ಮಾಲೀಕರ ಜೊತೆ ವಿಶೇಷ ಸಭೆ ನಡೆಸಿದ್ದೇವೆ, ಕಡ್ಡಾಯವಾಗಿ ಆಹಾರ ಗುಣಮಟ್ಟದ ಬಗ್ಗೆ ಜಾಗ್ರತೆ ವಹಿಸಲು ಸೂಚನೆ ನೀಡಿದ್ದೇವೆ. ಕಲುಷಿತ ಆಹಾರ, ಹಳಸಿದ ಆಹಾರವನ್ನ ಗ್ರಾಹಕರಿಗೆ ನೀಡಬಾರದು, ಪ್ರಮುಖವಾಗಿ ತರಕಾರಿ, ಹಣ್ಣು ಹಂಪಲು ಗುಣಮಟ್ಟವನ್ನ ಕಾಪಾಡಬೇಕು ಎಂದಿದ್ದಾರೆ.

ಗ್ರಾಹಕರಿಗೆ ನೀಡುವ ಪಾತ್ರೆ ಪ್ಲೇಟ್ ಗಳನ್ನ ಬಿಸಿ ನೀರಿನಲ್ಲಿ ತೊಳೆಯಬೇಕು ಬೇಸಿಗೆ ಸಂದರ್ಭದಲ್ಲಿ ಶುದ್ಧ ನೀರು ಬಳಸಬೇಕು ಬೆಯ್ಯಿಸದ ಆಹಾರವನ್ನ ಬಳಕೆ ಮಾಡುವುದನ್ನ ಕಡಿಮೆ ಮಾಡಬೇಕು, ಆಹಾರ ಸ್ವಲ್ಪ ಕಲುಷಿತವಾದರೂ ಕಾಲರಾ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ. ಪಂಚಾಯತ್ ರಾಜ್, ವ್ಯಾಪ್ತಿ ನೀರಿನ ತೊಟ್ಟಿಗಳ ನಿರಂತರ ಸ್ವಚ್ಛತೆಗೆ ಆದ್ಯತೆ ನೀಡಬೇಕು, ಕ್ಲೋರಿನೇಷನ್ ಹಾಗೂ ಸೂಪರ್ ಕ್ಲೋರಿನೇಷನ್ ಮಾಡಬೇಕು ಕಲುಷಿತ ಆಹಾರ ಸೇವನೆ ಮಾಡೋದ್ರಿಂದ ಕಾಲರಾ ಸೋಂಕು ಹರಡುತ್ತೆ.ತುಂಬಾ ವಾಂತಿ ಭೇದಿಯಾಗಿ ವ್ಯಕ್ತಿ ಸಾವನ್ನಪ್ಪವ ಆತಂಕ ಇದೆ ಎಂದ ಮುನ್ನೆಚ್ಚರಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.