

ಉಡುಪಿ : ಕುಂದಾಪುರ ತಾಲೂಕು ಹಕ್ಲಾಡಿ ಗ್ರಾಮದ ಕಟ್ಟಿನಮಕ್ಕಿ ನಿವಾಸಿ ಅರುಣ (15) ಎಂಬ ಬಾಲಕನು ಸೆಪ್ಟೆಂಬರ್ 20ರಂದು ಅಪರಾಹ್ನ 3:30ರ ಸುಮಾರಿಗೆ ಮನೆಯಿಂದ ಹೊರಗೆ ಹೋದವನು ವಾಪಾಸು ಬಾರದೇ ನಾಪತ್ತೆಯಾಗಿದ್ದಾನೆ. 5 ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ ದೂ.ಸಂಖ್ಯೆ: 08254-265333, 0.30: 948080545709 ಸಂಪರ್ಕಿಸಬಹುದು ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.