

ಉಪ್ಪಿನಂಗಡಿ: ಪತ್ನಿ ತವರು ಮನೆಗೆ ಹೋದ ಬೇಸರದಿಂದ ಶೇಷಪ್ಪ (38) ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಪಡ್ಲಡ್ಕ ಎಂಬಲ್ಲಿ ನಡೆದಿದೆ.
ಗುರುವಾರದಂದು ರಾತ್ರಿ ಮನೆಗೆ ಬಂದಾತ ತಾಯಿಯೊಂದಿಗೆ ಜಗಳವಾಡಿದ್ದರು. ಈ ಸಂದರ್ಭಸ್ವರಕ್ಷಣೆಗಾಗಿ ತಾಯಿ ನೆರೆಮನೆಗೆ ಹೋಗಿದ್ದರು.ಈ ವೇಳೆ ಮನೆಯ ಎದುರುಗಡೆಯ ಹಾಲ್ನಲ್ಲಿ ಅಡ್ಡಕ್ಕೆ ನೇಣು ಬಿಗಿದು ಈತ ಆತ್ಮಹತ್ಯೆ ಮಾಡಿದ್ದಾನೆ.ಆತನ ಪತ್ನಿ ತವರು ಮನೆಗೆ ಹೋಗಿರುವ ಬೇಸರದಿಂದ ಜೀವನದಲ್ಲಿ ಜಿಗುಪ್ಪೆ ಹೊಂದಿ ಈ ಕೃತ್ಯವೆಸಗಿರುವುದಾಗಿ ರಾಮಕ್ಕ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.