ಬಜಪೆ : ನದಿಯಲ್ಲಿ ಯುವಕ ನೀರುಪಾಲು ಶೋಧ ಕಾರ್ಯ

ಬಜಪೆ : ನದಿಯ ನೀರಿಗೆ ಬಿದ್ದು ಯುವಕನೊಬ್ಬ ನೀರು ಪಾಲಾದ ಘಟನೆ ಪೊಳಲಿ ಸೇತುವೆ ಬಳಿ ಫಲ್ಗುಣಿ ನದಿಯಲ್ಲಿ ನಡೆದಿದೆ. ಕಾವೂರು ಆಕಾಶಭವನ ನಿವಾಸಿ ಪ್ರಶಾಂತ್ ಕುಮಾರ್(41) ನೀರುಪಾಲಾದ ಯುವಕ. ತನ್ನ ಗೆಳೆಯರೊಂದಿಗೆ ಪೊಳಲಿ ದೇವಸ್ಥಾನಕ್ಕೆ ತೆರಳಿದ್ದ ಪ್ರಶಾಂತ್‌ ಆಚಾರಿ, ನದಿಗೆ ಇಳಿದು ಸ್ನಾನ ಮಾಡಿದ್ದರು. ಅವರ ಶೂವೊಂದರ ದಾರ ನೀರಿನಲ್ಲಿ ನಾಪತ್ತೆಯಾಗಿತ್ತು. ಅದನ್ನು ಹೆಕ್ಕಲೆಂದು ನೀರಿಗೆ ಇಳಿದಿದ್ದ ವೇಳೆ ಅವರು ನದಿ ನೀರಿನಲ್ಲಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಶಾಂತ್‌ ಆಚಾರಿ ವಿವಾಹಿತರಾಗಿದ್ದು, ತಿಂಗಳು ಪ್ರಾಯದ ಮಗು ಇದ್ದು, ಮಗುವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದೆ ಎನ್ನಲಾಗಿದೆ. ಸ್ಥಳಕ್ಕೆ ಬಜಪೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

Check Also

ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

ಕೋಝೀಕೋಡ್(ಕೇರಳ): ಕೇರಳದ ಖಾಸಗಿ ಆಸ್ಪತ್ರೆಯೊಂದರಲ್ಲಿ 14 ವರ್ಷದ ಬಾಲಕನೊಬ್ಬ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌(ಮಿದುಳು ತಿನ್ನುವ ಅಮೀಬಾ) ಎಂಬ ಅಪರೂಪದ ಮಿದುಳು ಸೋಂಕಿನಿಂದ ಕೊನೆಯುಸಿರೆಳೆದಿರುವುದಾಗಿ …

Leave a Reply

Your email address will not be published. Required fields are marked *

You cannot copy content of this page.