ಬೆಳ್ತಂಗಡಿ: ಅಯೋಧ್ಯೆ ಪ್ರಾಣ ಪ್ರತಿಷ್ಠೆಯಂದು ಮಗು ಜನನ – ಶ್ರೀರಾಮನೆಂದು ಹೆಸರಿಡಲು ದಂಪತಿ ತೀರ್ಮಾನ

ಬೆಳ್ತಂಗಡಿ: ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದ ರಾಮಲಲ್ಲಾ ಪ್ರಾಣ ಪ್ರತಿಷ್ಠೆಯ ದಿನದಂದೇ ಬೆಳ್ತಂಗಡಿ ತಾಲೂಕಿನ ಉಜಿರೆ ಬೆನಕ ಆಸ್ಪತ್ರೆಯಲ್ಲಿ ತಾಯಿಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗುವಿಗೆ ಶ್ರೀರಾಮನೆಂದು ಹೆಸರಿಡಲು ದಂಪತಿ ತೀರ್ಮಾನ ಮಾಡಿರುವುದಾಗಿ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಬಸನಬೆಟ್ಟು ನಿವಾಸಿ ಪವಿತ್ರ ಎಂಬವರು ಗಂಡು ಮಗುವಿಗೆ ಜನ್ಮ ನೀಡಿದ್ದು, ನಿನ್ನೆ ಅಯೋಧ್ಯೆಯಲ್ಲಿ ರಾಮನ‌ ಪ್ರಾಣಪ್ರತಿಷ್ಠಾಪನೆಯ ದಿನದಂದೇ ಗಂಡು ಮಗುವಿಗೆ ಜನನವಾಗಿರುವುದರಿಂದ ಮಗುವಿಗೆ ಶ್ರೀರಾಮ ಎಂದು ಹೆಸರಿಡಲು ಯೋಚಿಸುತ್ತೇವೆ ಎಂದು ಮಗುವಿನ ತಂದೆ ತಿಳಿಸಿದ್ದಾರೆ.

ಇನ್ನು ಸುಳ್ಯದ ಸುರೇಶ್ ಮತ್ತು ಪಡಂಗಡಿಯ ಪವಿತ್ರ ದಂಪತಿಗೆ 6 ವರ್ಷದ ಹೆಣ್ಣು ಮಗು ಇದ್ದು, ಇದೀಗ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ.

Check Also

ಮಣಿಪಾಲ: ಬ್ಯಾಂಕಿನವರ ಹೆಸರಿನಲ್ಲಿ ಯುವತಿ ಕರೆ | ಕ್ರೆಡಿಟ್ ಕಾರ್ಡ್‌ನಿಂದ ಸಾವಿರಾರು ರೂ. ವಂಚನೆ

ಮಣಿಪಾಲ: ಬ್ಯಾಂಕಿನವರ ಹೆಸರಿನಲ್ಲಿ ಕರೆ ಮಾಡಿ ಕ್ರೆಡಿಟ್ ಕಾರ್ಡ್‌ನಿಂದ ಸಾವಿರಾರು ರೂ. ಹಣ ಜಮೆ ಮಾಡುವ ಮೂಲಕ ವಂಚಿಸಿರುವ ಬಗ್ಗೆ …

Leave a Reply

Your email address will not be published. Required fields are marked *

You cannot copy content of this page.