ಉಳ್ಳಾಲ : ಮಲಗಿದ್ದಲ್ಲೇ ಹೃದಯಾಘಾತ- ನವವಿವಾಹಿತ ಸಾವು..!

ಉಳ್ಳಾಲ : ಮಲಗಿದ್ದಲ್ಲೇ ಹೃದಯಾಘಾತವಾಗಿ ನವವಿವಾಹಿತ ಮೃತಪಟ್ಟ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ.

ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು. ಜಿತೇಶ್ ಅವರು ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು ಇಂದು ಬೆಳಿಗ್ಗೆ ಏಳದ ಕಾರಣ, ಮನೆಮಂದಿ ಪರೀಕ್ಷಿಸಿದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮಂಗಳೂರಿನ ಕೆಟಿಎಂ ಷೋರೂಮಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿತೇಶ್, ಕೊರೊನಾ ಸಂದರ್ಭ ಪಂಡಿತ್ ಹೌಸ್ ನಿವಾಸಿ ಯುವತಿಯನ್ನು ವಿವಾಹವಾಗಿದ್ದರು.

ಮೃತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ

Check Also

ರುಚಿಕರವಾದ ಮಟನ್​ ಬಿರಿಯಾನಿ ಮಾಡುವ ವಿಧಾನ

ಬೇಕಾಗುವ ಸಾಮಗ್ರಿ : ಮಟನ್​​ 500 ಗ್ರಾಂ, 2 ಕಪ್​ ಅಕ್ಕಿ, 2 ಲವಂಗ, 2 ದಾಲ್ಚಿನ್ನಿ ಎಲೆ, ಹಸಿ …

Leave a Reply

Your email address will not be published. Required fields are marked *

You cannot copy content of this page.