

ಕಾರ್ಕಳ : ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆಗೈದಿರುವ ಪ್ರಕರಣ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೈಲಾಜೆ ಪಾದೆಮನೆ ಬೈದಾಳ್ ಎಂಬಲ್ಲಿ ಬಂದಿದೆ.
ಕೈಲಾಜೆ ಪಾದೆಮನೆ ಬೈದಾಳ್ ನ ಸಾವಿತ್ರಿ ರಾಘವೇಂದ್ರ ಭಟ್ ಅವರ ಮನೆಯಲ್ಲಿ ಗುರುವಾರ (ಫೆಬ್ರವರಿ 23 ) ಮನೆಯಲ್ಲಿ ಯಾರು ಇಲ್ಲದಿದ್ದ ವೇಳೆ ಬೆಳಿಗ್ಗೆ 10.30 ರಿಂದ 11.30ರ ಅವಧಿಯಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳಗಿನ ಕೊಠಡಿಯಲ್ಲಿರಿಸಿದ್ದ ಕಪಾಟಿನ ಬಾಗಿಲನ್ನು ತೆರೆದು 164 ತೂಕದ 4,92,000 ರೂ. ಮೌಲ್ಯದ ಚಿನ್ನಾಭರಣಗಳು ಹಾಗೂ 5,500 ನಗದು ದರೋಡೆಗೈದು ಪರಾರಿಯಾಗಿದ್ದಾರೆ.ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.