May 1, 2025
WhatsApp Image 2025-04-25 at 3.14.37 PM

ಕಡಬ: ಕರಾವಳಿಯ ಹೆಸರಾಂತ ಆಟಗಾರ, ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರೋ ಕಬಡ್ಡಿಯಲ್ಲಿ ಲಕ್ಷಾಂತರ ಅಭಿಮಾನಿಗಳ ಗಮನ ಸೆಳೆದ ಕಡಬದ ಯುವ ಆಟಗಾರ ಕೋಕಿಲಾನಂದ ನಿಧನ ಹೊಂದಿದ್ದಾರೆ.

ಬಡತನವಿದ್ದರೂ ಹೃದಯ ಶ್ರೀಮಂತಿಕೆ ಇದ್ದ ಇವರು ಕೆಲವು ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿ ಜೈಲಿಗೂ ಹೋಗಿ ಬಂದಿದ್ದರು. ಕಡಬ ನಿವಾಸಿಯಾಗಿದ್ದ ಇವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ತಂದೆಗೆ ಹೃದಯದ ಖಾಯಿಲೆಯಿದ್ದು ತಾಯಿ ಕೂಡಾ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಪತ್ನಿ ಪಂಚಾಯತ್ ನಲ್ಲಿ ಮೂರು ದಿನ ಕೆಲಸ ಮಾಡುತ್ತಿದ್ದು ದಂಪತಿಗೆ ಪುಟ್ಟ ಮಗು ಕೂಡಾ ಇದೆ. ಈ ಸಂದರ್ಭ ಕುಟುಂಬಕ್ಕೆ ಬೆನ್ನೆಲುಬಾಗ ಬೇಕಿದ್ದ ಕೋಕಿಲಾನಂದ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರ ನಿಧನಕ್ಕೆ ಅನೇಕ ಕಬಡ್ಡಿ ಆಟಗಾರರು, ಬಂಧು-ಬಳಗ, ಸ್ನೇಹಿತರು ಸಂತಾಪವನ್ನು ಸೂಚಿಸಿದ್ದಾರೆ

About The Author

Leave a Reply

Your email address will not be published. Required fields are marked *

<p>You cannot copy content of this page.</p>