May 14, 2025
WhatsApp Image 2024-07-25 at 9.14.54 AM

ಸುರತ್ಕಲ್: ಭಾರೀ ಗಾಳಿ ಮಳೆಗೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು, ಮನೆಯಲ್ಲಿದ್ದ ಬಾಲಕ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಜೋಕಟ್ಟೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಮೃತ ಬಾಲಕನನ್ನು ಮುಲ್ಕಿ ಸಮೀಪದ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಎಂದು ಗುರುತಿಸಲಾಗಿದೆ. ಉಳಿದಂತೆ ಮನೆಯೊಳಗಿದ್ದ ಸಂಜೀವ (55), ಸುರೇಶ್ (20), ಸವಿತಾ ( 19), ಸಖಿ (1) ಅವರಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು ಗಾಯಾಳುಗಳನ್ನು ರಕ್ಷಿಸಲಾಗಿದೆ. ಮಂಗಳೂರಿನ ಪಾಂಡೇಶ್ವರ ಮತ್ತು ಕದ್ರಿ ಅಗ್ನಿಶಾಮಕ ದಳದವರು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಧ್ಯರಾತ್ರಿ ಬೀಸಿದ ಭಾರೀ ಗಾಳಿ ಮಳೆಗೆ ತಡೆಗೋಡೆ ಕುಸಿದು ಮನೆ ಮೇಲೆ ಬಿದ್ದಿದೆ ಎನ್ನಲಾಗಿದೆ. ತಡೆ ಗೋಡೆ ಕುಸಿದು ಬಿದ್ದ ಮನೆಗೆ ಬಾಲಕ ಶೈಲೇಶ್ ಅತಿಥಿಯಾಗಿ ಬಂದಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>