ಮಾಜಿ ಶಾಸಕ ವಸಂತ ಬಂಗೇರ ಸಹೋದರ ಶತಾಯುಷಿ ಕೆ.ಜಿ. ಬಂಗೇರ ವಿಧಿವಶ

ಬೆಳ್ತಂಗಡಿ: ಮಾಜಿ ಶಾಸಕ ವಸಂತ ಬಂಗೇರ ಅವರ ಸಹೋದರ ಶತಾಯುಷಿ ಕೆ.ಜಿ(101) ಬಂಗೇರ ಅವರು ವಿಧಿವಶರಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಮುಗ್ಗ ಗುತ್ತು ಕುಟುಂಬದ ಹಿರಿಯರಾದ ಕೇದೆ ಗುರುವಪ್ಪ ಬಂಗೇರ ಮಂಗಳೂರಿನ ಪಾಂಡೇಶ್ವರದ ತಮ್ಮ ಸ್ವಗೃಹದಲ್ಲಿ ಜ. 25 ರಂದು ನಿಧನ ಹೊಂದಿದ್ದಾರೆ.‌ ನಿವೃತ್ತ ಕಂದಾಯ ಅಧಿಕಾರಿಯಾಗಿ ನಂತರ ಡೆಪ್ಯೂಟಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಬಿಲ್ಲವ ಸಮಾಜ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇವರು ಬೆಳ್ತಂಗಡಿ ಶ್ರೀ ಗುರುದೇವಾ ವಿವಿದೋದ್ದೇಶ ಸೇವಾ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷರಾಗಿ ಶ್ರೀ ಗುರುದೇವ ಕಾಲೇಜ್ ಬೆಳ್ತಂಗಡಿ ಇದರ ಟ್ರಸ್ಟಿಯಾಗಿ ಹಲವಾರು ಸೇವಾ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.‌ ಕಳೆದ ಬಾರಿ ಇವರ 100ನೇ ವರ್ಷದ ಜನ್ಮದಿನಾಚರಣೆಯನ್ನು ಬೆಳ್ತಂಗಡಿಯಲ್ಲಿ ಬಿಲ್ಲವ ಸಂಘದ ವತಿಯಿಂದ ವಿಜೃಂಭಣೆಯಿಂದ ಆಚರಿಸಲಾಗಿತ್ತು. ಮೃತರು ಪತ್ನಿ ಪುತ್ರ,ಇಬ್ಬರು ಪುತ್ರಿಯರು ಮಾಜಿ ಶಾಸಕರುಗಳಾದ ಕೆ. ವಸಂತ ಬಂಗೇರ ಹಾಗೂ ಕೆ. ಪ್ರಭಾಕರ ಬಂಗೇರ ಸೇರಿದಂತೆ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

Check Also

ರೋಟರಿ ಉಡುಪಿ: ವಿದ್ಯಾರ್ಥಿಗಳ ದತ್ತು ಸ್ವೀಕಾರ..!

ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ, ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ ಕಾರ್ಯಕ್ರಮವು ಸೋಮವಾರ …

Leave a Reply

Your email address will not be published. Required fields are marked *

You cannot copy content of this page.